ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm