ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm