ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm