ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm