ಬ್ರೇಕಿಂಗ್ ನ್ಯೂಸ್
15-10-20 07:48 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 15 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದ್ದು, ಅ.17ರಿಂದ ಅ.27ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅ.17ರ ಬೆಳಗ್ಗೆ 11.30ಕ್ಕೆ ಕಲಶ ಪ್ರತಿಷ್ಠೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7ರಿಂದ ಭಜನಾ ಕಾರ್ಯಕ್ರಮ, 9ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದೆ.
ಅ.18ರಂದು ದುರ್ಗಾ ಹೋಮ, ಅ.19ರಂದು ಆರ್ಯ ದುರ್ಗಾ ಹೋಮ, ಅ.20ರಂದು ಭಗವತೀ ದುರ್ಗಾ ಹೋಮ, ಅ.21ರಂದು ಕುಮಾರಿ ದುರ್ಗಾ ಹೋಮ, ಅ.22ರಂದು ಅಂಬಿಕಾ ದುರ್ಗಾ ಹೋಮ, ಅ.23ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ.24ರಂದು ಚಂಡಿಕಾ ಹೋಮ, ಹಗಲೋತ್ಸವ, ಅ.25ರಂದು ಸರಸ್ವತೀ ದುರ್ಗಾ ಹೋಮ, 11.30ಕ್ಕೆ ಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ, ಅ.26ರಂದು ವಾಗೀಶ್ವರಿ ದುರ್ಗಾ ಹೋಮ, ಅ.27ರಂದು ರಾತ್ರಿ 8.00ಕ್ಕೆ ಗುರುಪೂಜೆ ನಡೆಯಲಿದೆ.
ಕುದ್ರೋಳಿ ಮಂಗಳೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಆರು ವರ್ಷದೊಳಗಿನ ಮಕ್ಕಳನ್ನು ಉತ್ಸವದ 10 ದಿನ ದೇವಳಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಮಾಸ್ಕ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ. ದೇವಸ್ಥಾನ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್ಗೊಳಪಡಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ದೇವಸ್ಥಾನದ ವಠಾರ, ದೇವಾಲಯದೊಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೋ, ಸೆಲ್ಫಿ ಕಡ್ಡಾಯ ನಿಷೇಧ ಮಾಡಲಾಗಿದೆ.
ಹಿರಿಯ ನಾಗರಿಕರು ಮನೆಯಲ್ಲೇ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೇರ ಪ್ರಸಾರ, ಇವರ ಪರವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗುವುದು. ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2.30ರ ತನಕ ದೇವಸ್ಥಾನದ ನಿರ್ಗಮನ ದ್ವಾರದಲ್ಲಿ ಅನ್ನಪ್ರಸಾದ ಪ್ಯಾಕೇಟ್ ನೀಡಲು ನಿರ್ಧರಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಅ.26ರಂದು ನವದುರ್ಗೆ, ಶಾರದಾ ವಿಸರ್ಜನೆ ,ಅ.26ರ ಸೋಮವಾರ ಬೆಳಗ್ಗೆ 10ಕ್ಕೆ ವಾಗೀಶ್ವರಿ ದುರ್ಗಾ ಹೋಮ, 1ಕ್ಕೆ ಶಿವಪೂಜೆ, 1.15ಕ್ಕೆ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ, ರಾತ್ರಿ 7.30ರಿಂದ ಜನಕ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ, ಶ್ರೀಶಾರದಾ ವಿಸರ್ಜನೆ, ಅವಭೃತ ಸ್ನಾನ ನಡೆಯಲಿದೆ.
This Dasra 2020 Mangalore Kudroli temple issues guidelines were minor kids are not allowed and mobile phone are strictly prohibited inside the temple premsies.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm