ಬ್ರೇಕಿಂಗ್ ನ್ಯೂಸ್
15-10-20 07:48 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 15 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದ್ದು, ಅ.17ರಿಂದ ಅ.27ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅ.17ರ ಬೆಳಗ್ಗೆ 11.30ಕ್ಕೆ ಕಲಶ ಪ್ರತಿಷ್ಠೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7ರಿಂದ ಭಜನಾ ಕಾರ್ಯಕ್ರಮ, 9ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದೆ.

ಅ.18ರಂದು ದುರ್ಗಾ ಹೋಮ, ಅ.19ರಂದು ಆರ್ಯ ದುರ್ಗಾ ಹೋಮ, ಅ.20ರಂದು ಭಗವತೀ ದುರ್ಗಾ ಹೋಮ, ಅ.21ರಂದು ಕುಮಾರಿ ದುರ್ಗಾ ಹೋಮ, ಅ.22ರಂದು ಅಂಬಿಕಾ ದುರ್ಗಾ ಹೋಮ, ಅ.23ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ.24ರಂದು ಚಂಡಿಕಾ ಹೋಮ, ಹಗಲೋತ್ಸವ, ಅ.25ರಂದು ಸರಸ್ವತೀ ದುರ್ಗಾ ಹೋಮ, 11.30ಕ್ಕೆ ಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ, ಅ.26ರಂದು ವಾಗೀಶ್ವರಿ ದುರ್ಗಾ ಹೋಮ, ಅ.27ರಂದು ರಾತ್ರಿ 8.00ಕ್ಕೆ ಗುರುಪೂಜೆ ನಡೆಯಲಿದೆ.

ಕುದ್ರೋಳಿ ಮಂಗಳೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಆರು ವರ್ಷದೊಳಗಿನ ಮಕ್ಕಳನ್ನು ಉತ್ಸವದ 10 ದಿನ ದೇವಳಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಮಾಸ್ಕ್ ಇಲ್ಲದವರಿಗೆ ಪ್ರವೇಶ ಇರುವುದಿಲ್ಲ. ದೇವಸ್ಥಾನ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್ಗೊಳಪಡಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ದೇವಸ್ಥಾನದ ವಠಾರ, ದೇವಾಲಯದೊಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೋ, ಸೆಲ್ಫಿ ಕಡ್ಡಾಯ ನಿಷೇಧ ಮಾಡಲಾಗಿದೆ.
ಹಿರಿಯ ನಾಗರಿಕರು ಮನೆಯಲ್ಲೇ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೇರ ಪ್ರಸಾರ, ಇವರ ಪರವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗುವುದು. ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2.30ರ ತನಕ ದೇವಸ್ಥಾನದ ನಿರ್ಗಮನ ದ್ವಾರದಲ್ಲಿ ಅನ್ನಪ್ರಸಾದ ಪ್ಯಾಕೇಟ್ ನೀಡಲು ನಿರ್ಧರಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಅ.26ರಂದು ನವದುರ್ಗೆ, ಶಾರದಾ ವಿಸರ್ಜನೆ ,ಅ.26ರ ಸೋಮವಾರ ಬೆಳಗ್ಗೆ 10ಕ್ಕೆ ವಾಗೀಶ್ವರಿ ದುರ್ಗಾ ಹೋಮ, 1ಕ್ಕೆ ಶಿವಪೂಜೆ, 1.15ಕ್ಕೆ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ, ರಾತ್ರಿ 7.30ರಿಂದ ಜನಕ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ, ಶ್ರೀಶಾರದಾ ವಿಸರ್ಜನೆ, ಅವಭೃತ ಸ್ನಾನ ನಡೆಯಲಿದೆ.
This Dasra 2020 Mangalore Kudroli temple issues guidelines were minor kids are not allowed and mobile phone are strictly prohibited inside the temple premsies.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am