ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am