ಬ್ರೇಕಿಂಗ್ ನ್ಯೂಸ್
21-12-22 10:33 pm Mangalore Correspondent ಕರಾವಳಿ
ಮಂಗಳೂರು, ಡಿ.21 : ನಗರದ ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಕಡೆಗೆ ಸಾಗುವ ರಸ್ತೆಯ ಫುಟ್ ಪಾತ್ ನಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆ ಗಾಯಗೊಂಡ ಪ್ರಕರಣದಲ್ಲಿ ತೀವ್ರ ಮುಜುಗರಕ್ಕೀಡಾದ ಮಹಾನಗರ ಪಾಲಿಕೆ, ಘಟನೆ ಸಂಬಂಧಿಸಿ ಗುಂಡಿ ತೆಗೆದಿಟ್ಟು ನಿರ್ಲಕ್ಷ್ಯ ವಹಿಸಿದ ಏರ್ಟೆಲ್ ಕಂಪನಿ ವಿರುದ್ಧ ಬಂದರು ಠಾಣೆಗೆ ದೂರು ನೀಡಿದೆ.
ಈ ಬಗ್ಗೆ ಮಹಾನಗರ ಪಾಲಿಕೆಯಿಂದ ಬಂದರು ಠಾಣಾಧಿಕಾರಿಗೆ ದೂರು ಪತ್ರ ಬರೆಯಲಾಗಿದ್ದು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದೆ. ಡಿ.19ರಂದು ಮಧ್ಯಾಹ್ನ ರಸ್ತೆ ಬದಿ ನಡೆದು ಹೋಗುತ್ತಿದ್ದ ವೃದ್ಧ ಮಹಿಳೆ ಅಗೆದಿಟ್ಟ ಗುಂಡಿಗೆ ಬಿದ್ದು ಗಾಯಗೊಂಡಿದ್ದರು. ಈ ಕುರಿತ ಫೋಟೊ ವೈರಲ್ ಆಗಿದ್ದು ಮತ್ತು ಸ್ಮಾರ್ಟ್ ಸಿಟಿಯ ಕರ್ಮಕಾಂಡ ಎನ್ನುವ ರೀತಿ ಸುದ್ದಿ ಬಿತ್ತರಗೊಂಡಿದ್ದರಿಂದ ಮಂಗಳೂರಿನ ಜನಪ್ರತಿನಿಧಿಗಳು ಮತ್ತು ಮಹಾನಗರ ಪಾಲಿಕೆಗೆ ಮುಜುಗರ ಆಗಿತ್ತು.
ಘಟನೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯವರು ಬಂದರು ಠಾಣೆಗೆ ಪತ್ರ ಬರೆದು ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ಅಲ್ಲದೆ, ಭೂಗತ ಕೇಬಲ್ಗಳನ್ನು ಸರಿಪಡಿಸಲು ಪಾದಚಾರಿ ಮಾರ್ಗವನ್ನು ಅಗೆದು ಏರ್ಟೆಲ್ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಕಂಪನಿಯು ಕಾಮಗಾರಿ ನಡೆಸುವುದಕ್ಕೆ ಸ್ಥಳೀಯಾಡಳಿತ ಸಂಸ್ಥೆಯ ಅನುಮತಿ ಪಡೆದಿಲ್ಲ ಅಥವಾ ನಿವಾಸಿಗಳನ್ನು ಎಚ್ಚರಿಸಲು ಯಾವುದೇ ಮುನ್ನೆಚ್ಚರಿಕೆ ಕ್ರಮವನ್ನೂ ತೆಗೆದುಕೊಂಡಿಲ್ಲ. ಮೇಲಾಗಿ ದುರಸ್ತಿ ಕಾರ್ಯ ನಡೆದರೂ ಗುಂಡಿ ಮುಚ್ಚದ ಕಾರಣ ಮಹಿಳೆಯೊಬ್ಬರು ಗುಂಡಿಗೆ ಬಿದ್ದು ಗಾಯಗೊಳ್ಳಲು ಕಾರಣವಾಗಿದೆ ಎಂದು ಈ ಕುರಿತು ಬರೆದಿರುವ ದೂರು ಪತ್ರದಲ್ಲಿ ತಿಳಿಸಿದೆ.
Telecom giant Airtel is facing a criminal case in Karnataka's Mangaluru for digging a pit without permission and failing to close it after its work was finished. Mangaluru city's civic body, the MCC - Mangaluru City Corporation - filed the case on Tuesday after a woman fell into the pit and sustained injuries.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am