ಬ್ರೇಕಿಂಗ್ ನ್ಯೂಸ್
15-10-20 10:36 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಖ್ಯಾತ ತುಳು ರಂಗಭೂಮಿ ಕಲಾವಿದ, ನಿರ್ದೇಶಕ ಮಾಧವ ಜಪ್ಪುಪಟ್ನ (64) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸದೃಢರಾಗಿದ್ದ ಮಾಧವರಿಗೆ ಎರಡು ವಾರಗಳ ಹಿಂದೆ ಜ್ವರ ಬಂದಿತ್ತು. ಜ್ವರದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರು ಇಬ್ಬರು ಪುತ್ರರು, ಪತ್ನಿ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
40ಕ್ಕೂ ಹೆಚ್ಚು ನಾಟಕ ಕೃತಿಗಳನ್ನು ಬರೆದಿದ್ದ ಮಾಧವ ಜಪ್ಪುಪಟ್ನ ಅಭಿನಯದ ಜೊತೆಗೆ ನಿರ್ದೇಶನ, ಗಾಯನವನ್ನು ಮಾಡುತ್ತಿದ್ದರು. 90ರ ದಶಕದಲ್ಲಿ ಅಸಂಖ್ಯಾತ ಹೊಸ ಕಲಾವಿದರಿಗೆ ತಮ್ಮ ನಾಟಕದಲ್ಲಿ ಅವಕಾಶ ನೀಡಿ, ರಂಗಭೂಮಿಗೆ ಪರಿಚಯ ಮಾಡಿದ್ದರು. ಅವರು ಬರೆದು, ನಿರ್ದೇಶಿಸಿದ 'ಬಂಗಾರ್ ಕಂಡನಿ' ಎನ್ನುವ ನಾಟಕ 150ಕ್ಕೂ ಹೆಚ್ಚು ಪ್ರದರ್ಶನ ಕಂಡಿತ್ತು. 'ಈ ಬಲ್ಲ್ ಯಾವ' ಎನ್ನುವ ನಾಟಕ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ನಾಟಕದಲ್ಲಿ ಹಾಸ್ಯ ಕಲಾವಿದರಾಗಿ ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ತುಳು ಸಿನಿಮಾದಲ್ಲೂ ಅಭಿನಯಿಸಿದ್ದ ಮಾಧವ ಅವರು, ಬಂಗಾರ್ ಪಟ್ಲೇರ್ ಚಿತ್ರದಲ್ಲೂ ಅಭಿನಯಿಸಿದ್ದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರರಾಗಿದ್ದ ಮಾಧವ ಜೆಪ್ಪುಪಟ್ನ, ಶ್ರೀ ಭಗವತೀ ತೀಯಾ ಸೇವಾ ಸಂಘ, ನವನಿಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಪ್ರಶಸ್ತಿ ಒಳಗೊಂಡಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರು.
Mangalore Renowned Tulu artist Jeepu Patna passes away at 64 after being tested corona positive. Jeepu Patna was a singer, author and a great artist in the Tulu drama industry.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am