ಬ್ರೇಕಿಂಗ್ ನ್ಯೂಸ್
23-12-22 04:58 pm Mangalore Correspondent ಕರಾವಳಿ
ಮಂಗಳೂರು, ಡಿ.23: ಕಸ್ತೂರಿ ರಂಗನ್ ವರದಿಯನ್ನು ಕೈಬಿಡಲಾಗಿದೆ ಎಂದು ರಾಜ್ಯ ಸರಕಾರ ಸುಮ್ಮನೆ ಹೇಳುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ನಾಯಕರು ರಾಜಕೀಯ ಕಾರಣಕ್ಕೆ ಹೇಳಿಕೆ ನೀಡುತ್ತಿದ್ದಾರೆ. ವಾಸ್ತವದಲ್ಲಿ ಕಸ್ತೂರಿ ರಂಗನ್ ಕರಡು ವರದಿ ಜಾರಿಯಲ್ಲಿದೆ. ಅದನ್ನು ಡಬಲ್ ಇಂಜಿನ್ ಸರಕಾರದಲ್ಲಿ ಸಂಪೂರ್ಣ ಹಿಂಪಡೆಯುವ ಕೆಲಸ ಆಗಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಅರಣ್ಯ ಸಂರಕ್ಷಣೆ ಉದ್ದೇಶದಿಂದ ಕಸ್ತೂರಿ ರಂಗನ್ ವರದಿಯನ್ನು ರೆಡಿ ಮಾಡಲಾಗಿತ್ತು. ಆದರೆ ವರದಿಯ ಡ್ರಾಫ್ಟ್ ನೋಟಿಫಿಕೇಶನ್ ಆದಾಗ ಅದಕ್ಕೆ ಜನವಿರೋಧ ಬಂದಿತ್ತು. ಬಹಳಷ್ಟು ಕಡೆಗಳಲ್ಲಿ ಪ್ರತಿಭಟನೆಗಳಾಗಿದ್ದವು. ಆಗ ಬಿಜೆಪಿಯವರು ಕೂಡ ಪ್ರತಿಭಟನೆ ಮಾಡಿದ್ದರು. ಅದಕ್ಕೆ ಸ್ಪಂದಿಸಿ, ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದು ಬೇಡವೆಂದು ಹೇಳಿ ವರದಿ ಕೈಬಿಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದೆವು. ಆದರೆ ನಾವು ಪತ್ರ ಕಳುಹಿಸಿದ್ದರೂ, ಕೇಂದ್ರ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ.
ಕಸ್ತೂರಿ ರಂಗನ್ ಒಂದು ರಾಜ್ಯಕ್ಕೆ ಸೀಮಿತ ವಿಷಯವಲ್ಲ. ಕೇರಳ, ಕರ್ನಾಟಕ, ಮಹಾರಾಷ್ಟ್ರ ಹೀಗೆ ಹಲವು ರಾಜ್ಯಗಳು ವ್ಯಾಪ್ತಿಗೆ ಬರುತ್ತವೆ. ಆಯಾ ಭಾಗದ ಜನವಸತಿ ಪ್ರದೇಶಗಳು ವರದಿ ವ್ಯಾಪ್ತಿಗೆ ಬರುವುದರಿಂದ ಜನರು ವಿರೋಧ ವ್ಯಕ್ತಪಡಿಸಿದ್ದರು. ಹಾಗಿದ್ದರೂ, ಅದನ್ನು ಹಿಂಪಡೆಯುವ ಗೋಜಿಗೆ ಕೇಂದ್ರ ಮುಂದಾಗಿಲ್ಲ. ಈಗಲೂ ಮುಖ್ಯಮಂತ್ರಿ ಸೇರಿದಂತೆ ಪ್ರಮುಖ ನಾಯಕರು ಕೇವಲ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ರಮಾನಾಥ ರೈ ಹೇಳಿದರು.
ಎತ್ತಿನಹೊಳೆ ನಾವೇ ಮಾಡಿದ್ದು ಅಂತಿದ್ದಾರೆ
ಇದೇ ವೇಳೆ, ಕಸ್ತೂರಿ ರಂಗನ್ ವರದಿ ಜಾರಿಯಾದಲ್ಲಿ ಎತ್ತಿನಹೊಳೆ ಯೋಜನೆಗೆ ತೊಂದರೆಯಾಗುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ, ಎತ್ತಿನಹೊಳೆ ಯೋಜನೆಯ ವಿರುದ್ಧ ಆಗ ಪ್ರತಿಭಟನೆ ಮಾಡಿದವರು ಈಗ ನಾವೇ ಮಾಡಿದ್ದು ಅಂತ ರಾಜಕೀಯ ಲಾಭಕ್ಕಾಗಿ ಕೋಲಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆಗ ನಾನು ಉಸ್ತುವಾರಿ ಸಚಿವನಾಗಿದ್ದಾಗ, ಎತ್ತಿನಹೊಳೆ ವಿರುದ್ಧ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ಕೆಲವು ಪತ್ರಕರ್ತರು ಕೂಡ ಸುದ್ದಿಗೋಷ್ಟಿಯಿಂದ ಬಹಿಷ್ಕರಿಸಿ ಹೊರ ನಡೆದಿದ್ದರು. ರಾಜ್ಯ ಸರಕಾರದ ಪ್ರಮುಖ ಯೋಜನೆಯಾಗಿದ್ದರಿಂದ ನಾನು ವಿರೋಧ ಮಾತನಾಡಿಲ್ಲ. ಈಗಲೂ ವಿರೋಧಿಸಿ ಮಾತನಾಡುವುದಿಲ್ಲ. ಆದರೆ ಬಿಜೆಪಿಯವರು, ಈಗಿನ ಸಂಸದ ನಳಿನ್ ಕುಮಾರ್ ಎತ್ತಿನಹೊಳೆ ವಿರುದ್ಧ ಕರಸೇವೆ ಮಾಡುತ್ತೇನೆಂದು ಪಾದಯಾತ್ರೆ ಮಾಡಿದ್ದರು. ಈಗ, ಅವರೇ ಕೋಲಾರದಲ್ಲಿ ಅದು ಕಾಂಗ್ರೆಸ್ ಮಾಡಿದ್ದಲ್ಲ, ನಾವೇ ಮಾಡಿದ್ದು ಅಂತ ಹೇಳುತ್ತಿದ್ದಾರೆ. ಇವರಿಗೆಲ್ಲ ನಾಚಿಕೆಯಾಗಬೇಕು ಎಂದು ಹೇಳಿದರು.
ಎತ್ತಿನಹೊಳೆ ಯೋಜನೆಯನ್ನು ಸಿದ್ದರಾಮಯ್ಯ ಸರಕಾರ ಅನುಷ್ಟಾನಕ್ಕೆ ತಂದಿದ್ದು. ಆ ಸಂದರ್ಭದಲ್ಲಿ ಕರಾವಳಿ ಜನರಿಗೆ ತೊಂದರೆಯಾಗುತ್ತದೆ ಎಂದು ಹೇಳಿದ್ದಕ್ಕೆ, ಪಶ್ಚಿಮ ವಾಹಿನಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಅದಕ್ಕಾಗಿ ಸಿದ್ದರಾಮಯ್ಯ ಸರಕಾರ ಪ್ರತ್ಯೇಕ ಅನುದಾನವನ್ನೂ ಘೋಷಿಸಿದ್ದರು ಎಂದರು. ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ಉಮೇಶ್ ದಂಡಕೇರಿ, ಶಾಲೆಟ್ ಪಿಂಟೋ, ಅಪ್ಪಿ ಲೀಲಾಧರ್ ಮತ್ತಿತರರಿದ್ದರು.
Former Minister and KPCC Vice President Ramanath Rai challenged the government to scrap the Kasturirangan report on Western Ghats.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am