ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.


ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am