ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.


ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am