ಬ್ರೇಕಿಂಗ್ ನ್ಯೂಸ್
29-12-22 06:35 pm Mangalore Correspondent ಕರಾವಳಿ
ಉಳ್ಳಾಲ, ಡಿ.29 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ.
ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆದಿದ್ದು ಊರಿಗೇ ಊರೇ ರೋದಿಸುವ ದೃಶ್ಯ ಮನಕಲಕುವಂತಿತ್ತು.
6th Std boy dies of Brain Fever at Ullal in Mangalore. The deceased has been identified as Ashwith. Since two days Aswith was suffering from severe head pain and fever.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm