ಬ್ರೇಕಿಂಗ್ ನ್ಯೂಸ್
16-10-20 02:24 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 16: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ.17 ರಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್ಆರ್ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವ ಕೊರೊನಾ ನಿರ್ಬಂಧಗಳ ನಡುವೆ, ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೋವಿಡ್-19 ವಾರಿಯರ್ ಆಗಿ ಅವಿರತ ಶ್ರಮಿಸಿದ ಡಾ. ಆರತಿಕೃಷ್ಣ ಅವರನ್ನು ಮಂಗಳೂರು ದಸರಾ ಮಹೋತ್ಸದ ಚಾಲನೆಗೆ ಆಮಂತ್ರಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.




'ಮಲೆನಾಡ ಇಂದಿರಾ' ಡಾ.ಆರತಿ ಕೃಷ್ಣ
ಡಾ. ಆರತಿಕೃಷ್ಣ ಚಿಕ್ಕಮಗಳೂರು ಜಿಲ್ಲೆಯವರು. ಇವರ ತಂದೆ ಬೇಗಾನೆ ರಾಮಯ್ಯ, ತಾಯಿ ಸೀತಾ ಬಿ. ರಾಮಯ್ಯ. ತಂದೆ ಶೃಂಗೇರಿ ಎನ್.ಆರ್. ಪುರದಲ್ಲಿ ವಕೀಲರಾಗಿದ್ದು, ಶೃಂಗೇರಿ ಶಾಸಕರಾಗಿ, ರಾಜ್ಯ ಗ್ರಾಮೀಣಾಭಿವೃದ್ಧಿ ಮಾಜಿ ಸಚಿವರಾಗಿದ್ದರು.
ಕೋವಿಡ್ ಸಂಕಷ್ಟ ಕಾಲದಲ್ಲಿ ಅನಿವಾಸಿ ಭಾರತೀಯರು ಯಾರೇ ಸಂಕಷ್ಟಕ್ಕೀಡಾದರೂ ಕೂಡಲೇ ಸ್ಪಂದಿಸಿ ಪರಿಹಾರ ಒದಗಿಸಿದವರು ಡಾ.ಆರತಿ ಕೃಷ್ಣ. ಆರು ತಿಂಗಳಿಂದೀಚೆಗೆ 40 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ವಿದೇಶದಿಂದ ತಾಯ್ನಾಡಿಗೆ ಕರೆತರುವಲ್ಲಿ ಶ್ರಮಿಸಿದ್ದಾರೆ. ಎನ್ಆರ್ಐ ಸಂಸ್ಥೆಗಳಿಗೆ ಚಾರ್ಟರ್ ವಿಮಾನಕ್ಕೆ ಬೇಕಾದ ಅನುಮತಿಯನ್ನು ರಾಯಭಾರಿ ಕಚೇರಿ ಮೂಲಕ ಒದಗಿಸಿಕೊಡಲು ಶ್ರಮಿಸಿದ್ದರು.
ಜಗತ್ತಿನಾದ್ಯಂತ ಇರುವ ಹಲವಾರು ದೇಶಗಳ ರಾಯಭಾರಿಗಳ ನಿರಂತರ ಸಂಪರ್ಕದಿಂದ ಚೀನಾ, ಇಟಲಿ, ಆಸ್ಟ್ರೇಲಿಯಾ, ಅಮೇರಿಕ. ಫಿಲಿಪೈನ್ಸ್, ಸ್ಪೇನ್, ಫಿನ್ಲ್ಯಾಂಡ್, ಮಲೇಷಿಯಾ, ವಿಯೆಟ್ನಾಂ, ಕಾಂಬೋಡಿಯಾ, ಲಾವೋಸ್, ಪೋಲೆಂಡ್, ಬಾಂಗ್ಲಾದೇಶ, ಶ್ರೀಲಂಕಾ, ಇಂಗ್ಲೆಂಡ್, ಕೊಲ್ಲಿ ರಾಷ್ಟ್ರಗಳು ಮೊದಲಾದೆಡೆ ನೆಲೆಸಿರುವ ಭಾರತೀಯರು ಅಥವಾ ಇತರೇ ಮಂದಿ ಸಹಾಯ ಕೇಳಿ ಬಂದವರಿಗೆ ವ್ಯವಸ್ಥೆ ಮಾಡಿ ಲಕ್ಷಾಂತರ ಜನರ ಮನ ಗೆದ್ದಿದ್ದಾರೆ.
ಇವರ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ, ಸಹ್ಯಾದ್ರಿ ಸಂಘದ ಗೌರವ ಪ್ರಶಸ್ತಿ, ಮಹಾತ್ಮಗಾಂಧಿ ಸಮ್ಮಾನ ಅವಾರ್ಡ್ ಬ್ಯಾಂಕಾಕ್ನಲ್ಲಿ, ದುಬೈ ಕನ್ನಡ ಕಾಯಕ ರತ್ನ, ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಗವರ್ನರ್ನಿಂದ ಇಂಡಿಯನ್ ಕಮ್ಯೂನಿಟಿ ಎಡ್ವಕೇಟ್ ಪ್ರಶಸ್ತಿ ಅರಸಿ ಬಂದಿವೆ.
Covid warrior and former vice president of NRI forum, Dr Arathi Krishna will inaugurate the Mangaluru Dasara 2020, which is going to begin on October 17 at Kudroli Sri Gokarnanatheshwara temple in the city.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm