ಬ್ರೇಕಿಂಗ್ ನ್ಯೂಸ್
04-08-20 12:27 pm Udupi Reporter ಕರಾವಳಿ
ಉಡುಪಿ, ಆ. 04: ನಾಳೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುತ್ತದೆ. ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ, ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6 ರ ಬೆಳಿಗ್ಗೆ 6 ಘಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ, ಸಿಆರ್ಪಿಸಿ ಕಲಂ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಇರುವ ಅವಧಿಯಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿ, ಸ್ಪೋಟಕಗಳನ್ನು ಸಿಡಿಸುವುದು ನಿಷೇಧಿಸಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿ, ಸಾರ್ವಜನಿಕ ರಾಜಕೀಯ, ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಶವಗಳ, ಆಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುದನ್ನು, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ, ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ. ಸಭ್ಯತೆ ಅಥವಾ ನೀತಿಯನ್ನು, ಅತಿಕ್ರಮಿಸಬಹುದಾದ, ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆ ಕುಗ್ಗಿಸಬಹುದಾದ, ಅಪರಾಧವನ್ನು ಮಾಡಲು, ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು, ಅಥವಾ ಪ್ರದರ್ಶಿಸುವುದು, ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪಟಾಕಿ ಮಾರಾಟ ಮಾಡುವ ಪರಾವನಿಗೆದಾರರು ಅಂಗಡಿಗಳನ್ನು ಮುಚ್ಚುವುದು, ಮತ್ತು ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm