ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm