ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.
ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm