ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.

ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am