ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.

ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm