ಬ್ರೇಕಿಂಗ್ ನ್ಯೂಸ್
15-01-23 10:33 pm Mangalore Correspondent ಕರಾವಳಿ
ಉಳ್ಳಾಲ, ಜ.15 : ದೇಶಾದ್ಯಂತ ಗೋ ಮಾಂಸಾಚರಣೆಯೇ ಮೇಳೈಸುತ್ತಿರುವ ಸಂದರ್ಭದಲ್ಲಿ ಪುಣ್ಯಕೋಟಿ ನಗರದ ಗೋಸೇವಾ ಮಾಸಾಚರಣೆ ಎಂಬುದು ಹೊಸ ಪ್ರಯೋಗ ಎಂದು ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅವರು ಅಭಿಪ್ರಾಯ ಪಟ್ಟರು.
ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ಜ.14 ರಿಂದ ಫೆ.13ರ ವರೆಗೆ ಒಂದು ತಿಂಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿರುವ ಗೋಸೇವಾ ಮಾಸಾಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗೋವಿಗೆ ಸನಾತನ ಹಿಂದು ಧರ್ಮದಲ್ಲಿ ಅತ್ಯಂತ ಮಹತ್ವ ಇದೆ. ಇಂದು ಕಾಲ ಬದಲಾಗುತ್ತಿದ್ದು ಎಲ್ಲಿಯೂ ಗೋವಿನ ಸೇವಾ ಮಾಸಾಚರಣೆ ನಡೆಯುತ್ತಿಲ್ಲ. ಬದಲಾಗಿ ದೇಶದ ಮೂಲೆ, ಮೂಲೆಯಲ್ಲೂ ಗೋ ಮಾಂಸಾಚರಣೆಯೇ ನಡೆಯುತ್ತಿದೆ. ಗೋವು ಎಂದರೆ ಮುಗ್ಧ ಹಾಗೂ ಪಾವಿತ್ರ್ಯವುಳ್ಳ ದೇವತೆ. ಅಂತಹ ಗೋವಿನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಪುಣ್ಯಕೋಟಿ ನಗರದಲ್ಲಿ ನಡೆಯುತ್ತಿರುವ ಗೋ ಸೇವಾ ಮಾಸಾಚರಣೆಯಂತಹ ಈ ಕಾರ್ಯಕ್ರಮದ ಮೂಲಕ ಗೋವಿನ ಸಂರಕ್ಷಣೆಗಾಗಿ ಪಣ ತೊಡೋಣ ಎಂದು ಕರೆ ನೀಡಿದರು.



ಕಾರ್ಯಕ್ರಮ ಉದ್ಘಾಟಿಸಿದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಮನೆಯಲ್ಲಿ ಎಷ್ಟು ಗೋವುಗಳಿವೆಯೋ ಅದಕ್ಕೆ ಅನುಸಾರವಾಗಿ ವ್ಯಕ್ತಿಯ ಶ್ರೀಮಂತಿಕೆಯನ್ನು ಗುರುತಿಸುತ್ತಿದ್ದರು. ಆದರೆ ಈಗ ಕಾರು ಬಂಗಲೆಯ ಮೂಲಕ ಶ್ರೀಮಂತಿಕೆಯನ್ನು ಗುರುತಿಸುವಂತಾಗಿದೆ. ಗೋವಿಗೆ ನಮ್ಮ ಮನೆಯಲ್ಲಿ ಮಾತ್ರವಲ್ಲದೆ ನಮ್ಮ ಮನದಲ್ಲೂ ಜಾಗ ಕೊಡಬೇಕು. ಪುಣ್ಯಕೋಟಿ ನಗರದಲ್ಲಿ ನಡೆಯುವ ಗೋಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದರು.


ಕಾರ್ಯಕ್ರಮದ ಉದ್ಘಾಟನೆ ಮುನ್ನ ಮುಡಿಪುವಿನಿಂದ ಹೂಹಾಕುವ ಕಲ್ಲು ಮಾರ್ಗವಾಗಿ ಕೈರಂಗಳ ಪುಣ್ಯಕೋಟಿ ನಗರದ ವರೆಗೆ ಭವ್ಯವಾದ ಶೋಭಾಯಾತ್ರೆ ವಿವಿಧ ಸಾಂಸ್ಕೃತಿಕ ವೈಭವದೊಂದಿಗೆ ನಡೆಯಿತು. ಟ್ರಕ್ ಗಳಲ್ಲಿ ನೂರಾರು ರಾಧಾಕೃಷ್ಣ ವೇಷಧಾರಿ ಮಕ್ಕಳು, ನೂರಾರು ಮಂದಿ ಕುಣಿತ ಭಜಕರು ಶೋಭಾಯಾತ್ರೆಗೆ ಮೆರುಗು ನೀಡಿದರು.


ಒಂದು ತಿಂಗಳ ಕಾಲ ನಡೆಯುವ ಗೋ ಸೇವಾ ಮಾಸಾಚರಣೆಯಲ್ಲಿ ಗೋ ಪ್ರೇಮಿಗಳು ಗೋಶಾಲೆಗೆ ಭೇಟಿ ನೀಡಿ ವಿವಿಧ ರೀತಿಯಲ್ಲಿ ಗೋ ಸೇವೆಯನ್ನ ನಡೆಸಬಹುದಾಗಿದೆ. ಗೋಮಾಸಾಚರಣೆ ಸಂಚಾಲಕ ಟಿ.ಜಿ ರಾಜಾರಾಮ್ ಭಟ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
Goseva is fading but beef meat is increasing in India says Sadashiv shetty in Ullal, Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm