ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am