ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm