ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm