ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 07:27 pm
Mangalore Correspondent
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm