ಬ್ರೇಕಿಂಗ್ ನ್ಯೂಸ್
18-01-23 11:02 pm Mangalore Correspondent ಕರಾವಳಿ
ಮಂಗಳೂರು, ಜ.18: ಮೀಸಲಾತಿ ನೀಡುವುದು ದೇಶಕ್ಕೆ, ಅಭಿವೃದ್ಧಿಗೆ ಮಾರಕ ಎಂದು ತಿಳಿದಿದ್ದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ಅಧಿಕಾರ ದಾಹದಿಂದ ಅವುಗಳ ತಾಳಕ್ಕೆ ಕುಣಿಯುತ್ತಿವೆ. ಈ ರೀತಿ ಮೀಸಲಾತಿ ನೀಡುತ್ತಾ ಹೋದರೆ ದೇಶದಲ್ಲಿ ಮುಂದೆ ದಂಗೆಯೇಳುವ ಸ್ಥಿತಿ ಬಂದೀತು. ಮೀಸಲಾತಿಗೆ ಹೋರಾಟ ನಡೆಸುವುದನ್ನು ನಾವು ಖಂಡಿಸುತ್ತೇವೆ. ಇದರ ಬಗ್ಗೆ ಜನಾಂದೋಲನ ರೂಪಿಸುತ್ತೇವೆ ಎಂದು ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಮೂಲ ಸಂವಿಧಾನದಲ್ಲಿ ಯಾವುದೇ ಮೀಸಲಾತಿ ನೀಡುವುದನ್ನು ವಿರೋಧಿಸಲಾಗಿದೆ. ಅಲ್ಲದೆ, ಧರ್ಮಾಧರಿತ ಮೀಸಲಾತಿ ನೀಡಲೇಬಾರದು ಎಂದಿದೆ. ಆದರೆ ನಮ್ಮಲ್ಲಿ ಅಲ್ಪಸಂಖ್ಯಾತ ಹೆಸರಲ್ಲಿ ಧರ್ಮ ಆಧರಿತ ಮೀಸಲಾತಿ ಕಲ್ಪಿಸಲಾಗಿದೆ. ಧರ್ಮಕ್ಕೆ, ಜಾತಿಗೊಂದು ಮೀಸಲಾತಿ ನೀಡುತ್ತಾ ಹೋದರೆ ಸಮರ್ಥ ಯುವಜನತೆ ಅವಕಾಶ ವಂಚಿತರಾಗುತ್ತಾರೆ. ಅಧಿಕಾರ ಲಾಭ ಪಡೆಯಲು ಮೀಸಲಾತಿ ಕೊಡುವುದು, ಒಂದು ವರ್ಗವನ್ನು ಓಲೈಸುವುದು ಎಷ್ಟು ಸರಿ. ಮೀಸಲಾತಿ ಕೊಡುವದರ ಅರ್ಥ ಏನೆಂಬುದನ್ನು ರಾಜಕಾರಣಿಗಳು ಮೊದಲು ತಿಳಿದುಕೊಳ್ಳಬೇಕಿದೆ.

ಮೀಸಲಾತಿ ಹೆಸರಲ್ಲಿ ಒಂದು ಕುಟುಂಬದ ಎಲ್ಲರಿಗೂ ಸರಕಾರಿ ಹುದ್ದೆಗಳಲ್ಲಿ ಅವಕಾಶ ಕೊಡುತ್ತಾ ಹೋದರೆ, ಇತರೇ ಸಮುದಾಯಗಳು ಏನು ಮಾಡಬೇಕು. ಒಮ್ಮೆ ಮೀಸಲಾತಿ ಪಡೆದವರು ಆರ್ಥಿಕ ಸಬಲರಾದರೂ ಮತ್ತೆ ಮತ್ತೆ ತಮ್ಮ ಮಕ್ಕಳಿಗೆಲ್ಲ ಮೀಸಲಾತಿಯಿಂದ ಲಾಭ ಪಡೆಯುತ್ತಾ ಹೋದರೆ ಮೀಸಲಾತಿಗೇನು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳಾದವರು ಕೂಡ ಒಂದು ಜಾತಿಯ ಪರವಾಗಿ ಮೀಸಲಾತಿಗೆ ಆಗ್ರಹಿಸುತ್ತಿದ್ದಾರೆ. ಈಡಿಗ, ಬಿಲ್ಲವರಿಗಾಗಿ ಒಬ್ಬ ಸ್ವಾಮೀಜಿ, ಪಂಚಮಸಾಲಿ ಪರ ಇನ್ನೊಬ್ಬ ಸ್ವಾಮೀಜಿ ಧ್ವನಿ ಎತ್ತುವುದಾದರೆ ಇವರು ಕಾವಿ ಹಾಕಿ ಹಿಂದು ಸಮಾಜವನ್ನು ಪ್ರತಿನಿಧಿಸುವುದು ಯಾಕೆ ಎಂದು ಧರ್ಮೇಂದ್ರ ಪ್ರಶ್ನೆ ಮಾಡಿದರು.
ಇದಕ್ಕಾಗಿ ಒಂದೋ ಆರ್ಥಿಕ ಮೀಸಲಾತಿಯನ್ನು ಮಾತ್ರ ನೀಡಬೇಕು. ಇಲ್ಲವೇ ಗ್ರಾಮಾಂತರ ಪ್ರದೇಶದವರಿಗೆ ಮೀಸಲಾತಿ ನೀಡಲಿ. ಜಾತಿಗೊಂದು ಮೀಸಲಾತಿ ನೀಡುವುದನ್ನು ವಿರೋಧಿಸಿ ನಾವು ಸಮಾನ ಮನಸ್ಕರು ಪಕ್ಷ ಭೇದ ಮರೆತು ವಿರೋಧಿಸುತ್ತೇವೆ. ಇದಕ್ಕೊಂದು ಎನ್ ಜಿಓ ಸ್ಥಾಪನೆ ಮಾಡುವ ಉದ್ದೇಶ ಇದೆ. ಜಾತ್ಯತೀತ ರಾಷ್ಟ್ರ ಎಂದ ಮೇಲೆ ಜಾತಿಗೇನು ಕೆಲಸವಿದೆ. ಜಾತಿ ಕೇಳಿ ಉದ್ಯೋಗ ಕೊಡುವುದೇ ಅಸಭ್ಯ. ಶಾಲೆ, ಕಾಲೇಜಿನಲ್ಲಿ ಜಾತಿ ಕಾಲಂ ತೆಗೆದು ಹಾಕಬೇಕು ಎಂದು ಧರ್ಮೇಂದ್ರ ಹೇಳಿದರು.
Reservation is a threat to nation slams Hindu Maha saba in Mangalore
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 08:43 pm
Mangalore Correspondent
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm