ಬ್ರೇಕಿಂಗ್ ನ್ಯೂಸ್
19-01-23 12:57 pm Udupi Correspondent ಕರಾವಳಿ
ಉಡುಪಿ, ಜ.19: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್ಚಂದ್ರ ಶೆಟ್ಟಿ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ.
ನಾಲ್ಕು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದ ಪ್ರತಾಪ್ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ಕೆಪಿಸಿಸಿ ಕಾರ್ಯದರ್ಶಿ, ಉಪಾಧ್ಯಕ್ಷ, ಎಐಸಿಸಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೇರಿದಂತೆ ಪಕ್ಷದ ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದರು. ಜ.13ರಂದು ದಿಢೀರ್ ಆಗಿ ಕೆಪಿಸಿಸಿ ಸದಸ್ಯತ್ವಕ್ಕೆ ಪ್ರತಾಪ್ಚಂದ್ರ ಶೆಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಬುಧವಾರ ಹಾಲಾಡಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ಚಂದ್ರ ಶೆಟ್ಟಿ, ರಾಜೀನಾಮೆ ಹಿಂದೆ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪಕ್ಷದಲ್ಲಿ ಕ್ರಿಯಾಶೀಲ ನಾಯಕರಿದ್ದು ಮುಂದಿನ ಚುನಾವಣೆಯಲ್ಲಿ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯಲಿದ್ದೇನೆ ಎಂದು ತಿಳಿಸಿದ್ದಾರೆ.
Udupi Congress leader, former Karnataka Legislative Council chairman and MLC K Prathap Chandra Shetty has resigned from his KPCC membership on Wednesday, January 18.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm