ಬ್ರೇಕಿಂಗ್ ನ್ಯೂಸ್
18-10-20 07:49 pm Headline Karnataka News Network ಕರಾವಳಿ
ಬೆಂಗಳೂರು, ಅಕ್ಟೋಬರ್ .18 : ನಿಮ್ಮ ಬಳಿ ಬಂಡೆ ಇರಬಹುದು. ಆದರೆ, ನಮ್ಮ ಬಳಿ ನಿಮ್ಮ ಕಡೆಯಿಂದಲೇ ಬಂದಿರುವ ಬಂಡೆ ಒಡೆಯುವ ಡೈನಮೈಟ್ಗಳು ಇವೆ. ಒಂದೊಂದು ಡೈನಮೈಟ್ ನಿಮ್ಮ ಬಂಡೆಯನ್ನು ಪುಡಿ ಪುಡಿ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕನಕಪುರ ಬಂಡೆ ಎಂದೇ ಹೆಸರು ಗಳಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕುಟುಕಿದ್ದಾರೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಳಿನ್, ಕನಕಪುರದಿಂದ ಬಂದು ಗೂಂಡಾಗಿರಿ ರಾಜಕಾರಣ ಮಾಡುತ್ತಿದ್ದೀರಿ. ಮಾಧ್ಯಮದಲ್ಲಿ ನಿಮ್ಮನ್ನ ಬಂಡೆ ಎಂದು ಕರೆಯುತ್ತಾರೆ. ನಿಮ್ಮ ಬಳಿ ಬಂಡೆ ಇರಬಹುದು. ಆದರೆ ನಮ್ಮ ಬಳಿ ನಿಮ್ಮಿಂದ ಬಂದಿರುವ ಡೈನಾಮೈಟ್ಗಳಿವೆ. ಒಂದೊಂದು ಡೈನಮೈಟ್ ಗಳು ನಿಮ್ಮನ್ನು ಪುಡಿಪುಡಿ ಮಾಡುತ್ತಾರೆ ಎಂದರು.

ತಿಹಾರ್ ಜೈಲಿಗೆ ಹೋದಾಗ ಮೆರವಣಿಗೆ, ಜೈಲಿನಿಂದ ಹೊರಬಂದಾಗ ಮೆರವಣಿಗೆಯನ್ನು ಜನ ನೋಡಿದ್ದಾರೆ. ನಿಮ್ಮ ಮೆರವಣಿಗೆಯಿಂದ ಜನ ಬೇಸತ್ತಿದ್ದಾರೆ. ನೀವು ಮನೆಯಲ್ಲಿ ಕೂರುವ ವ್ಯವಸ್ಥೆ ಮಾಡುತ್ತಾರೆ. ಡಿಕೆಶಿ ಅವರೇ ನಿಮ್ಮ ಜಾತಿ ರಾಜಕೀಯ ಇನ್ನು ನಡೆಯಲ್ಲ. ಅಭಿವೃದ್ಧಿ ರಾಜಕೀಯದಿಂದ ಮುನಿರತ್ನ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದು ಹೇಳಿದರು.
ಸಚಿವ ಆರ್.ಅಶೋಕ್ ಮತ್ತು ಅರವಿಂದ ಲಿಂಬಾವಳಿ ಜೋಡೆತ್ತುಗಳು. ಈ ಜೋಡೆತ್ತು ಸೇರಿ ಮುನಿರತ್ನರನ್ನು ಗೆಲ್ಲಿಸಲಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಗೆಲ್ಲುವ ಮೂಲಕ ದಾಖಲೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕಾರ್ಪೊರೇಟರ್ ಗಳು ಕಮಲ ಪಾಳಯಕ್ಕೆ ಬರುತ್ತಿದ್ದಾರೆ. ಎಚ್ಎಂಟಿ ವಾರ್ಡ್ ಕಾಂಗ್ರೆಸ್ ಕಾರ್ಪೋರೇಟರ್ ಆಶಾ ಸುರೇಶ್ ಅಧಿಕೃತವಾಗಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು ನಳಿನ್.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಉಪಾಧ್ಯಕ್ಷ ಲಿಂಬಾವಳಿ, ಸಚಿವ ಆರ್. ಅಶೋಕ್ ಹಾಗೂ ಆರ್.ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸಹ ಭಾಗಿಯಾಗಿದ್ದರು.
ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ನಾರಾಯಣಸ್ವಾಮಿ, ಕಾಂಗ್ರೆಸ್ ಕಾರ್ಪೋರೇಟರ್ ಗಳಾದ ಜಾಲಹಳ್ಳಿಯ ಶ್ರೀನಿವಾಸ್, ಯಶವಂತಪುರದ ಜಿ.ಕೆ.ವೆಂಕಟೇಶ್, ಹೆಚ್ಎಂಟಿ ವಾರ್ಡ್ ನ ಆಶಾ ಸುರೇಶ್, ಲಕ್ಷ್ಮೀದೇವಿನಗರದ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯ ವಾರ್ಡ್ ಮೋಹನ್ ಕುಮಾರ್, ಲಗ್ಗೆರೆ ವಾರ್ಡ್ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯ ಸಿದ್ದೇಗೌಡ ಸೇರಿದಂತೆ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
BJP Naleen Kumar Kateel slams Kanakapura Bande Congress Kpcc President DK Shivakumar over RR Nagar Byelections in Bangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm