ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm