ಬ್ರೇಕಿಂಗ್ ನ್ಯೂಸ್
21-01-23 09:47 pm Mangalore Correspondent ಕರಾವಳಿ
ಪುತ್ತೂರು, ಜ.21 : ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಆರೋಪದ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮುಂದಿನ ವಿಚಾರಣೆ ವೇಳೆಗೆ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬ ಸಂಶೋಧನಾ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಶನಿವಾರ ಪುತ್ತೂರಿನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು, ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎಂಬುದನ್ನು ಸಂಶೋಧನೆ ಮಾಡುವ ಬಗ್ಗೆ ನಿಟ್ಟೆ ವಿಶ್ವವಿದ್ಯಾಲಯದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನ ರಾಮ ಇನ್ಸ್ಟಿಟ್ಯೂಟ್ ಜೊತೆಗೂ 2 ವರ್ಷಗಳ ಹಿಂದೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎಂದು ಸಾಬೀತು ಪಡಿಸಲು ಸಂಶೋಧನೆ ನಡೆಯುತ್ತಿದೆ. ಹಂತ ಹಂತವಾಗಿ ವರದಿಗಳು ಬರುತ್ತಿದ್ದು, ನ್ಯಾಯಾಲಯದ ಮುಂದಿನ ವಿಚಾರಣೆ ವೇಳೆ ಈ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ರೂಪಿಸಲಾದ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್ಡಿಎಫ್) ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ರೋಗ ಸಂಶೋಧನೆ, ಬೆಂಬಲ ಬೆಲೆ, ಅಕ್ರಮ ಆಮದು ತಡೆ, ಗುಣಮಟ್ಟ ಪರಿಶೀಲನೆ ಇತ್ಯಾದಿ ಕ್ಷೇತ್ರದಲ್ಲಿ ಎಆರ್ಡಿಎಫ್ ಉತ್ತಮವಾದ ಕೆಲಸ ಮಾಡಿದೆ. ಇನ್ನಷ್ಟು ಕೆಲಸ ಮಾಡಲು ಪ್ರತಿಷ್ಠಾನದಲ್ಲಿ ಹಣದ ಕೊರತೆ ಇದೆ ಎಂದು ಹೇಳಿದರು.

ಅಡಿಕೆ ಹಳದಿ ರೋಗ ಸಂಶೋಧನೆಗೆ ಸಂಬಂಧಿಸಿ ಸರ್ಕಾರ ಬಿಡುಗಡೆ ಮಾಡಿದ 25 ಕೋಟಿ ರೂಪಾಯಿಗೂ ಕ್ಯಾಂಪ್ಕೋ ಸಂಸ್ಥೆಗೂ ಸಂಬಂಧವಿಲ್ಲ. ಅದನ್ನು ತೋಟಗಾರಿಕಾ ಇಲಾಖೆ ಮೂಲಕ ನಿರ್ವಹಿಸಲಾಗುತ್ತದೆ. ಎಲೆ ಚುಕ್ಕಿ ರೋಗದಿಂದ ತುತ್ತಾಗಿರುವ ರೈತರಿಗೆ ಪರಿಹಾರ ಕೊಡುವ ಬಗ್ಗೆ ಕ್ಯಾಂಪ್ಕೋ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಿದರು. ಎಲೆ ಚುಕ್ಕಿ ರೋಗಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ನಲ್ಲಿ ಮಂಗಳೂರಿನಲ್ಲಿ ವಿಜ್ಞಾನಿಗಳನ್ನು ಕರೆಸಿ ವಿಚಾರ ಸಂಕಿರಣ ನಡೆಸಿದ್ದೆವು, ಇದರ ಆಧಾರದ ಮೇಲೆ ಸಂಶೋಧನೆಗೆ ಸೆಂಟ್ರಲ್ ಕಮಿಟಿ ನಿರ್ಮಾಣವಾಗಿದೆ, ಆ ಕಮಿಟಿಯ ಶಿಫಾರಸ್ಸಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ದಿವಂಗತ ಸುಭ್ರಾಯ್ ಭಟ್ಟರು ಮತ್ತು ಸಾಗರದ ಎಲ್ ಟಿ ತಿಮ್ಮಪ್ಪ ಹೆಗಡೆಯವರ ಸಹಕಾರದಿಂದ ಕ್ಯಾಂಪ್ಕೋ ಸಂಸ್ಥೆ ಈ ಹಂತಕ್ಕೆ ಬಂದು ತಲುಪಿದೆ, ಸುವರ್ಣ ಮಹೋತ್ಸವ ಅಂಗವಾಗಿ ಕ್ಯಾಂಪ್ಕೋ ಫ್ಯಾಕ್ಟರಿಯಲ್ಲಿ ತೆಂಗಿನ ಕಾಯಿಗಳಿಂದ ಉತ್ಪನ್ನ ತಯಾರಿಸಲು ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದು ತಿಳಿಸಿದರು
Areca nut is not cancerous says CAMPCO president Kishor in Puttur.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 02:00 pm
HK News Staffer
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm