ಬ್ರೇಕಿಂಗ್ ನ್ಯೂಸ್
22-01-23 01:26 pm Mangalore Correspondent ಕರಾವಳಿ
ಮಂಗಳೂರು, ಜ 22; ಪ್ರಯಾಣಿಕರ ಬೇಡಿಕೆಗೆ ಭಾರತೀಯ ರೈಲ್ವೆ ಮಣಿದಿದೆ. ಮುರುಡೇಶ್ವರ- ಬೆಂಗಳೂರು ನಡುವಿನ ರೈಲು ಸೇವೆಯನ್ನು 2023ರ ಮೇ ತಿಂಗಳ ಕೊನೆಯ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಚಳಿಗಾಲದ ಅವಧಿಗಾಗಿ ಜನವರಿ ಅಂತ್ಯದ ತನಕ ಮಾತ್ರ ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಲಾಗಿತ್ತು.

ಕರಾವಳಿ ಭಾಗದ ಜನರು ಈ ರೈಲು ಸೇವೆ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ನೈಋತ್ಯ ರೈಲ್ವೆ ಈ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಮೇ ತಿಂಗಳ ಅಂತ್ಯದ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈ ರೈಲಿಗೆ ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಇರುವ ಹಿನ್ನಲೆಯಲ್ಲಿ ಈ ರೈಲನ್ನು ಪ್ರತಿದಿನ ಓಡಿಸಬೇಕು ಎಂದು ಸಹ ಕುಂದಾಪುರ ರೈಲ್ವೆ ಹಿತರಕ್ಷಣಾ ಸಮಿತಿ ಒತ್ತಾಯಿಸುತ್ತಿದೆ.
ವೇಳಾಪಟ್ಟಿ;
ಈ ರೈಲು ಬೆಂಗಳೂರು ನಗರದ ಯಶವಂತಪುರದಿಂದ ಶನಿವಾರ ರಾತ್ರಿ 11.55ಕ್ಕೆ ಹೊರಡಲಿದೆ. ಮರುದಿನ ಮಧ್ಯಾಹ್ನ 1 ಗಂಟೆಗೆ ಮುರುಡೇಶ್ವರ ತಲುಪಲಿದೆ. ಮುರುಡೇಶ್ವರದಿಂದ ಭಾನುವಾರ ಮಧ್ಯಾಹ್ನ 1.30ಕ್ಕೆ ಹೊರಟು, ಮರುದಿನ ಮುಂಜಾನೆ 4 ಗಂಟೆಗೆ ಯಶವಂತಪುರ ತಲುಪುತ್ತದೆ.
ವಾರಾಂತ್ಯದ ಶನಿವಾರ ಬೆಂಗಳೂರಿನಿಂದ ರಾತ್ರಿ ತಡವಾಗಿ ರೈಲು ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ, ಉಡುಪಿ, ಕುಂದಾಪುರ ಕಡೆಯ ಜನರು ಸಂಚಾರ ನಡೆಸಲು ಅನುಕೂಲವಾಗಿತ್ತು.
ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಇದೆ. ಎಲ್ಲಾ ಸೀಟುಗಳು ಭರ್ತಿಯಾಗಿ ವೈಟಿಂಗ್ ಲಿಸ್ಟ್ನಲ್ಲಿ ಜನರು ಕಾಯಬೇಕಿತ್ತು. ಆದ್ದರಿಂದ ಈ ರೈಲನ್ನು ಪ್ರತಿದಿನ ಓಡಿಸಬೇಕು ಎಂದು ಬೇಡಿಕೆ ಇಡಲಾಗಿದೆ.
ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಡಿಸೆಂಬರ್ 10 ರಿಂದ ಜನವರಿ 29ರ ತನಕ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಈ ಮೊದಲು ಘೋಷಣೆ ಮಾಡಿತ್ತು. ಈಗ ಮತ್ತೆ ರೈಲು ಸೇವೆಯನ್ನು ಮೇ ಅಂತ್ಯದ ತನಕ ವಿಸ್ತರಣೆ ಮಾಡಲಾಗಿದೆ.
ಮುರುಡೇಶ್ವರ ಬೆಂಗಳೂರು ನಡುವೆ ರೈಲು ಸಂಖ್ಯೆ 06564, 06563 ರೈಲು ಸಂಚಾರ ನಡೆಸುತ್ತದೆ. ಈ ರೈಲು ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಮುರುಡೇಶ್ವರಕ್ಕೆ ತಲುಪಲಿದೆ.
ಬೆಂಗಳೂರಿನ ಯಶವಂತಪುರದಿಂದ-ಮುರುಡೇಶ್ವರಕ್ಕೆ ಈ ವಿಶೇಷ ರೈಲು ವಾರಕ್ಕೆ ಒಮ್ಮೆ ಸಂಚಾರ ನಡೆಸುತ್ತದೆ. ಆದರೆ ರೈಲು ದಕ್ಷಿಣ ಕನ್ನಡ, ಉಡುಪಿ ಮೂಲಕ ಸಾಗುವುದರಿಂದ ನೂರಾರು ಜನರಿಗೆ ಅನುಕೂಲವಾಗಲಿದೆ. ಈ ರೈಲು ಸೇವೆಗೆ ಜನರ ಪ್ರತಿಕ್ರಿಯೆ ಹೀಗೆ ಮುಂದುವರೆದರೆ ಮತ್ತೆ ಅದನ್ನು ವಿಸ್ತರಣೆ ಮಾಡಲಾಗುತ್ತದೆ.
ವೇಗ ಪರೀಕ್ಷೆ;
ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ಎಲೆಕ್ಟ್ರಿಕಲ್ ಇಂಜಿನಿಯರ್ ಜೈಪಾಲ್ ಸಿಂಗ್ ಶನಿವಾರ ಮೈಸೂರು ವಿಭಾಗದ ಮಾಸರಹಳ್ಳಿ-ಶಿವಮೊಗ್ಗ ಸಿಂಗಲ್ ಲೈನ್ ವಿಭಾಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಗಂಟೆಗೆ 90 ಕಿ. ಮೀ. ವೇಗದಲ್ಲಿ ವೇಗ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದರು.
ಮತ್ತೊಂದು ಕಡೆ ಲೋಂಡಾ-ಮೀರಜ್ ಡಬ್ಲಿಂಗ್ ಯೋಜನೆಯ ಭಾಗವಾಗಿ ಗೋಕಾಕ್-ಘಟಪ್ರಭಾ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 125ರಲ್ಲಿ ಹೊಸದಾಗಿ ದ್ವಿಗುಣಗೊಂಡ ಮಾರ್ಗದಲ್ಲಿ ವೇಗ ಪ್ರಯೋಗ ನಡೆಸಲಾಯಿತು. ರೈಲು ಗಂಟೆಗೆ 120 ಕಿ. ಮೀ. ಗರಿಷ್ಠ ವೇಗದಲ್ಲಿ ಸಾಗಿದೆ.
Murudeshwar bangalore train extended till may end by railway department.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm