ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm