ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm