ಬ್ರೇಕಿಂಗ್ ನ್ಯೂಸ್
30-01-23 06:33 pm Mangalore Correspondent ಕರಾವಳಿ
ಉಳ್ಳಾಲ, ಜ.30 : ಕೊಲ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಹಿದಾಯತ್ ನಗರ ನಿವಾಸಿ ಬಾಷರ್ ಅಹಮ್ಮದ್ (22)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕ. ಭಾನುವಾರ ರಾತ್ರಿ ರಾ.ಹೆ. 66ರ ಕೊಲ್ಯ ಸಮೀಪದ ಅಡ್ಕದಲ್ಲಿ ಮಂಗಳೂರಿನಿಂದ ತಲಪಾಡಿಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಡಿಕ್ಕಿಯ ತೀವ್ರತೆಗೆ ಕಬ್ಬಿಣದ ವಿದ್ಯುತ್ ಕಂಬವೇ ಧರೆಗುರುಳಿತ್ತು. ಪರಿಣಾಮ ಸ್ಥಳದಲ್ಲಿಯೇ ಕಾರು ಚಾಲಕ ಮಂಜೇಶ್ವರ ಉದ್ಯಾವರದ ಹತ್ತನೇ ಮೈಲು ನಿವಾಸಿ ಅಬ್ದುಲ್ ರಿಫಾಯಿ(24) ಮೃತಪಟ್ಟಿದ್ದ.




ಸೋಮವಾರ ಮೃತಪಟ್ಟ ಬಾಷರ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದ. ಜ.28 ರಂದು ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ಚಿಕ್ಕಪ್ಪನ ಪುತ್ರ ಬಾಷರ್ ಜೊತೆಗೆ ಆತನ ಸಹಪಾಠಿಗಳಾದ ಫಾತಿಮಾ ಹಾಗೂ ರೇವತಿ ಜತೆ ಮಂಗಳೂರಿನಿಂದ ತಲಪಾಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಜಾಗರೂಕತೆ, ನಿರ್ಲಕ್ಷ್ಯದ ಚಾಲನೆಯಿಂದಾಗಿ ಘಟನೆ ಸಂಭವಿಸಿದೆ. ಅಬ್ದುಲ್ ರಿಫಾಯಿ ಕಟ್ಟಡ ಗುತ್ತಿಗೆದಾರ ಸಯ್ಯದ್ ಎಂಬವರ ಪುತ್ರನಾಗಿದ್ದ. ರಿಫಾಯಿ ವಿದೇಶದಿಂದ ಬಂದ ಖುಷಿಯಲ್ಲಿ ಸಹೋದರ ಬಾಷರ್ ಮತ್ತು ಸಹಪಾಠಿಗಳೊಂದಿಗೆ ನಿನ್ನೆ ಒಟ್ಟಾಗಿದ್ದರು. ಕಾರಿನಲ್ಲಿದ್ದ ವಿದ್ಯಾರ್ಥಿನಿಯರಾದ ರೇವತಿ ಹಾಗೂ ಫಾತಿಮಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಯದಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಕಾರು, ಚಾಲಕ ಸಾವು
Kolya accident , another injured dies in hospital, two dead in Ghastly crash. In a horrific car accident that occured in NH 66 in Kolya on Sunday, January 27, a man was killed, another seriously injured while two young women escaped with minor injuries. The accident occured near Kolya-Adka.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm