ಬ್ರೇಕಿಂಗ್ ನ್ಯೂಸ್
19-10-20 08:46 pm Headline Karnataka News Network ಕರಾವಳಿ
ಬೆಂಗಳೂರು, ಅಕ್ಟೋಬರ್ .19: ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಅ.21, 22 ಮತ್ತು 23 ರಂದು ಸಮುದ್ರಕ್ಕಿಳಿಯದಂತೆ ಎಚ್ಚರಿಸಲಾಗಿದೆ.
ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಕರಾವಳಿ ಭಾಗಗಳಲ್ಲಿ ಅ.20ರಂದು ಯೆಲ್ಲೋ ಅಲರ್ಟ್ ಹಾಗೂ ಅ.21 ಹಾಗೂ 22ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.21 ಹಾಗೂ 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಸೋಮವಾರದಂದು ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹಾಸನದಲ್ಲಿ 7 ಸೆಂ.ಮೀ, ಕೃಷ್ಣರಾಜಸಾಗರ 5 ಸೆಂ.ಮೀ, ಸೋಮವಾರಪೇಟೆ ಹಾಗೂ ಬೆಂಗಳೂರಿನಲ್ಲಿ 4 ಸೆಂ.ಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.

24 ಗಂಟೆಗಳ ಒಳಗಾಗಿ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಅ.19 ರಿಂದ 23 ರವರೆಗೆ ಬಹುತೇಕ ಎಲ್ಲಾ ಕಡೆ ಮಳೆಯಾಗಲಿದೆ. ಉ.ಕನ್ನಡ, ಉಡುಪಿ, ದ.ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಅ. 19 ರಿಂದ 22ರವರೆಗೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಕಲ್ಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳದಲ್ಲಿ, ಜಿಲ್ಲೆಗಳಲ್ಲಿ ಅ.19 ರಿಂದ 22 ರಂದು ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಅ.21ರವರೆಗೆ ಕೆಲವು ಕಡೆ ಭಾರೀ ಮಳೆ ಹಾಗೂ ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದರು
Yellow alert has been issued as heavy rains are very likely to occur at isolated places in Karnataka Karavali regions. Fishermen have been Asked Not to Venture into Sea in karavali from October 21st to 23rd.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am