ಬ್ರೇಕಿಂಗ್ ನ್ಯೂಸ್
04-02-23 02:28 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಹಳೆಯಂಗಡಿ - ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮಂಗಳವಾರ ಮಧ್ಯರಾತ್ರಿ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ‘ಮ್ಯಾಡ್ ಇನ್ ಕುಡ್ಲ’ ಹೆಸರಿನ ಯೂಟ್ಯೂಬರ್ ಹಳೆಯಂಗಡಿ ಇಂದಿರಾ ನಗರ ನಿವಾಸಿ ಅರ್ಪಿತ್ (35) ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದು ಆತ ಜಾಮೀನು ಪಡೆದಿರುವ ಮಾಹಿತಿ ಲಭಿಸಿದೆ.

ಮೊನ್ನೆ ಮಂಗಳವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಮಧ್ಯಪ್ರದೇಶದಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿ ಮೂಲ್ಕಿ ಬಳಿಯ ಪಡು ಪಣಂಬೂರಿನಲ್ಲಿ ಟೈರ್ ಪಂಕ್ಚರ್ ಆಗಿತ್ತು. ಹೆದ್ದಾರಿ ಬದಿ ಲಾರಿಯನ್ನು ನಿಲ್ಲಿಸಿ ಟೈರ್ ಚೇಂಜ್ ಮಾಡುತ್ತಿದ್ದಾಗ ಆರೋಪಿ ಅರ್ಪಿತ್ ಚಲಾಯಿಸ್ತಿದ್ದ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ತೀರಾ ಎಡಗಡೆಗೆ ಬಂದು ಅಲ್ಲಿದ್ದವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಮಧ್ಯಪ್ರದೇಶ ಮೂಲದ ಬಬ್ಲು (23) ಮತ್ತು ಅಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದರು.
ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಪೊಲೀಸರು ಆರೋಪಿಯನ್ನು ಸೆರೆಹಿಡಿದು ಸೂಕ್ತ ಸೆಕ್ಷನ್ ಹಾಕದೆ ಕೋರ್ಟಿಗೆ ಹಾಜರುಪಡಿಸಿ ಆತನಿಗೆ ಜಾಮೀನು ಸಿಗುವಂತೆ ಮಾಡಿದ್ದಾರೆ. ಇತ್ತೀಚೆಗೆ ರಾಜಧಾನಿ ದೆಹಲಿಯಲ್ಲಿ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಯುವತಿಯನ್ನು ಎಳೆದೊಯ್ದಿದ್ದು ಭಾರೀ ಸಂಚಲನ ಮೂಡಿಸಿತ್ತು. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಈ ಹಿಂದೆ ನಟ ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದೂ ಇದೆ. ಆದರೆ ಮಂಗಳೂರು ಪೊಲೀಸರು ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಎದ್ದು ಕಾಣುತ್ತದೆ. ಆರೋಪಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವ ಸಾಧ್ಯತೆಯಿದ್ದು ಇಬ್ಬರು ದಾರುಣ ಸಾವು ಕಂಡಿದ್ದರೂ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಲ್ಲ.
ಪ್ರಕರಣದ ಬಗ್ಗೆ ಸುರತ್ಕಲ್ ಸಂಚಾರಿ ಪೊಲೀಸರಲ್ಲಿ ಕೇಳಿದಾಗ, ಆರೋಪಿ ವಿರುದ್ಧ ನಿರ್ಲಕ್ಷ್ಯದ ಚಾಲನೆ ಬಗ್ಗೆ ಕೇಸು ದಾಖಲು ಮಾಡಿದ್ದೇವೆ. ಅದು ಠಾಣೆಯಲ್ಲಿ ಜಾಮೀನು ನೀಡಬಹುದಾದ ಪ್ರಕರಣ ಆಗಿರುವುದರಿಂದ ಸ್ಟೇಶನ್ ಬೈಲ್ ನೀಡಿ ಕಳಿಸಿದ್ದೇವೆ ಎಂದಿದ್ದಾರೆ. ಮರ್ಡರ್ ಕೇಸ್ ಯಾಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ, ಆತನ ಉದ್ದೇಶ ಕೊಲೆ ಮಾಡುವುದು ಆಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. ಕಾರು ಚಾಲಕ ಇಬ್ಬರನ್ನು ಬಲಿ ಪಡೆದರೂ, ಕೇಸನ್ನು ಎಷ್ಟು ಸೌಮ್ಯವಾಗಿಸಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ.
Mangalore Hit and run accident two killed on spot, mad in kudla Arpit arrested and granted station bail by the traffic police in surathkal even after killing two. Arpith indravadan runs a YouTube channel called mad in kudla and was working as a radio jockie before.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm