ಬ್ರೇಕಿಂಗ್ ನ್ಯೂಸ್
04-02-23 06:52 pm Mangalore Correspondent ಕರಾವಳಿ
ಉಳ್ಳಾಲ, ಫೆ.4: ತೊಕ್ಕೊಟ್ಟಿನ ಉದ್ದೇಶಿತ ಜಾಗದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ಹೆಸರಲ್ಲಿ ಭವನ ನಿರ್ಮಾಣ ಮಾತ್ರವಲ್ಲದೆ ಜೀಟಿಗೆ ಹಿಡಿದು ಪೋರ್ಚುಗೀಸರನ್ನ ಸೋಲಿಸಿದ ವೀರರಾಣಿಯ ಚರಿತ್ರೆ ದೇಶಕ್ಕೆ ತಿಳಿಸುವ ಥೀಮ್ ಪಾರ್ಕ್ ನಿರ್ಮಾಣವಾಗಬೇಕು. ಮಂಗಳೂರಿನ ಏರ್ಪೋರ್ಟಿಗೂ ರಾಣಿ ಅಬ್ಬಕ್ಕಳ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ನೆರಳಲ್ಲಿ ಉಳ್ಳಾಲದ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ಶನಿವಾರ ನಡೆದ "ವೀರ ರಾಣಿ ಅಬ್ಬಕ್ಕ ಉತ್ಸವ"ದಲ್ಲಿ ಸಭಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಣಿ ಅಬ್ಬಕ್ಕನಂತಹ ವೀರ ವನಿತೆಯರು ಬರೀ ಚರಿತ್ರೆ ಅಲ್ಲ ಪ್ರಸ್ತುತ. ಆಕೆಯ ಹೆಸರು ದೇಶದಾದ್ಯಂತ ವ್ಯಾಪಿಸಲು ರಾಜ್ಯ ಮಟ್ಟದ ಅಬ್ಬಕ್ಕ ಉತ್ಸವ ನಡೆಯುವಂತಾಗಬೇಕು. ತೊಕ್ಕೊಟ್ಟಿನಲ್ಲಿ 5 ಕೋಟಿ ವೆಚ್ಚದಲ್ಲಿ ಅಬ್ಬಕ್ಕ ಭವನ ನಿರ್ಮಿಸಲು ಡಿಪಿಆರ್ ಆಗಿದೆ. ಭವನದೊಳಗಡೆ ಅಬ್ಬಕ್ಕಳಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಸಿನೆಮಾಗಳನ್ನ ನಮ್ಮ ಭವಿಷ್ಯದ ಪೀಳಿಗೆಗೆ ತೋರಿಸಲು ಸುಸಜ್ಜಿತ ಥಿಯೇಟರ್ ಜೊತೆ ಅಬ್ಬಕ್ಕನ ಇತಿಹಾಸ ಹೇಳುವ ಥೀಮ್ ಪಾರ್ಕ್ ಕೂಡ ನಿರ್ಮಾಣವಾಗಬೇಕೆಂದು ಹೇಳಿದರು.



ಅಬ್ಬಕ್ಕ ಚರಿತ್ರೆ ಪಠ್ಯದಲ್ಲಿ ಬರಬೇಕು
ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ ರಾಣಿ ಅಬ್ಬಕ್ಕ ದೇಶದ ಪ್ರಥಮ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ್ತಿ, ಆಕೆಯ ಚರಿತ್ರೆಯನ್ನ ಪಠ್ಯ ಪುಸ್ತಕಗಳಲ್ಲಿ ಅಳವಡಿಸುವಂತಾಗಬೇಕು. ಅಬ್ಬಕ್ಕಳ ಹೆಸರಲ್ಲಿ ಇನ್ನೂ ಒಂದು ಭವನ ಕಟ್ಟಲು ಸಾಧ್ಯ ಆಗಿಲ್ಲ ಅನ್ನೋದೆ ಬೇಸರದ ವಿಚಾರ. ರಾಜ್ಯದ ಎಲ್ಲಾ ಕಡೆಗಳಿಗೆ ಭರಪೂರ ಅನುದಾನ ಸಿಗುತ್ತೆ. ಅಬ್ಬಕ್ಕ ಭವನ ನಿರ್ಮಾಣಕ್ಕೆ ಅನುದಾನ ಮಂಜೂರಾದರೂ ಇನ್ನೂ ಯಾಕೆ ಬಿಡುಗಡೆ ಆಗಿಲ್ಲ. ಈ ಬಗ್ಗೆ ಸಂಬಂಧಪಟ್ಟವರಲ್ಲಿ ಮಾತುಕತೆ ನಡೆಸಿ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆಂದರು.



ಸಾಹಿತಿ ಡಾ.ಪಾರ್ವತಿ ಜಿ. ಐತಾಳ್ ಮತ್ತು ತುಳು ಪಾಡ್ದನ ಕ್ಷೇತ್ರದ ಪ್ರತಿಭೆ ಶ್ರೀಮತಿ ಭವಾನಿ ಅವರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಗಳೂರು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಉತ್ಸವ ಉದ್ಘಾಟಿಸಿದರು. ಕಾಂತಾರ ಚಲನಚಿತ್ರದ ಖ್ಯಾತಿಯ ನಟಿ ವಿದುಷಿ ಮಾನಸಿ ಸುಧೀರ್ ಸಾಂಸ್ಕೃತಿಕ, ಸಾಹಿತ್ಯ ಕಾರ್ಯಕ್ರಮಗಳನ್ನ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Theme park in the name of Abbakka, Mangalore airport also to be named as Abbakka letter to Modi says Shobha Karandlaje.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm