ಬ್ರೇಕಿಂಗ್ ನ್ಯೂಸ್
06-02-23 05:39 pm Mangalore Correspondent ಕರಾವಳಿ
ಮಂಗಳೂರು, ಫೆ.6 : ನಾವು ನರೇಂದ್ರ ಮೋದಿಯಂತೆ ಸುಳ್ಳು ಹೇಳುವುದಿಲ್ಲ. ಯಾರೊಬ್ಬರ ಖಾತೆಗೂ 15 ಲಕ್ಷ ಹಣ ಬಂದಿಲ್ಲ. ಜನಧನ್ ಖಾತೆಗೆ ಈವರೆಗೂ 500 ರೂ. ಬಂದಿಲ್ಲ. ಮೋದಿ ಎಲ್ಲ ಹಣವನ್ನು ಅದಾನಿಗೆ ನೀಡಿದ್ದಾರೆ. ಅದಾನಿ 75 ಸಾವಿರ ಕೋಟಿ ರೂಪಾಯಿ ಮೋದಿಯಿಂದ ಪಡೆದು ಗುಳುಂ ಮಾಡಿದ್ದಾನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಮೂಲ್ಕಿ - ಮೂಡಬಿದರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಹರಿಪ್ರಸಾದ್ ಹರಿತ ಮಾತುಗಳಿಂದ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಬಡವರ ಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿಲ್ಲ. ತಮ್ಮ ಸ್ನೇಹಿತರನ್ನು ದೊಡ್ಡ ಉದ್ಯಮಿಗಳಾಗಿಸಲು ಮಾತ್ರ ಯೋಜನೆ ಹಮ್ಮಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಜನಸಾಮಾನ್ಯರಿಗೆ ಮನೆ ನಡೆಸುವುದಕ್ಕೂ ಸಂಕಷ್ಟ ಎದುರಾಗುತ್ತಿದೆ. ಆದರೆ ಕಾಂಗ್ರೆಸ್ ಯಾವತ್ತೂ ಬಡವರ ಪರ ಇದೆ ಎನ್ನುವುದನ್ನು ನಿರೂಪಿಸುತ್ತಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಮನೆ ನಡೆಸುವ ಪ್ರತಿ ಮಹಿಳೆಗೂ ತಿಂಗಳಲ್ಲಿ 2000 ರೂ. ಕೊಡಲಾಗುವುದು. ಈ ಯೋಜನೆಯಲ್ಲಿ ಬಡವರು, ಶ್ರೀಮಂತ, ನಿರ್ಗತಿಕ ಅಂತ ವ್ಯತ್ಯಾಸ ಇಲ್ಲ. ಮನೆ ನಡೆಸುವ ಪ್ರತಿ ಯಜಮಾನಿಗೂ ತಿಂಗಳಿಗೆ 2 ಸಾವಿರ ರೂ. ಕೊಡಲಾಗುವುದು. ವರ್ಷಕ್ಕೆ 24 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದರು.
ಕರಾವಳಿಯಲ್ಲಿ ಶಾಂತಿ ಕದಡುವ ಹೇಳಿಕೆಗಳನ್ನು ನೀಡಿ ದಾರಿ ತಪ್ಪಿಸಲಾಗುತ್ತಿದೆ. ಇಲ್ಲಿನ ದೇವಾಲಯಗಳ ಉತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್ ಹಾಕಲಾಗುತ್ತಿದೆ. ಮುಲ್ಕಿಯ ದುರ್ಗಾಪರಮೇಶ್ವರಿ ದೇವಾಲಯವನ್ನು 12ನೇ ಶತಮಾನದಲ್ಲಿ ಬಪ್ಪಬ್ಯಾರಿ ಕಟ್ಟಿಸಿದ ಇತಿಹಾಸ ಇದೆ. ಬಪ್ಪ ಬ್ಯಾರಿ ಯಾರು? ಮುಸ್ಲಿಂ ವ್ಯಕ್ತಿ ಕಟ್ಟಿಸಿದ ದೇವಾಲಯಕ್ಕೆ ಹಿಂದುಗಳು ಹೋಗಬಾರದು ಎಂದು ಹೇಳುವ ಧೈರ್ಯವಿದೆಯೆ? ಇತಿಹಾಸವನ್ನು ತಿರುಚಿ ಜನರ ಭಾವನೆ ಕೆರಳಿಸುವ ಕೆಲಸ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಕೆರಳಿಸಲಾಗುತ್ತಿದೆ. ಮಕ್ಕಳ ಕೈಯಲ್ಲಿ ಚಾಕು ಚೂರಿ ನೀಡಿ ಭಯೋತ್ಪಾದಕರನ್ನು ಮಾಡಲು ಹೊರಟಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
Adani has eaten 75 thousand crores of Modi slams BK Hariprasad in Mangalore.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm