ಬ್ರೇಕಿಂಗ್ ನ್ಯೂಸ್
06-02-23 10:56 pm Mangalore Correspondent ಕರಾವಳಿ
ಮಂಗಳೂರು, ಫೆ.6: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ವಾಸವಿದ್ದ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿದ್ದು ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನ ಶಕ್ತಿನಗರದ ಸಿಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಯರಿಗೆ ಫುಡ್ ಪಾಯ್ಸನ್ ಆಗಿ ವಾಂತಿ ಮತ್ತು ಉಸಿರಾಟದ ಸಮಸ್ಯೆಗೆ ಈಡಾಗಿದ್ದಾರೆ. ಪ್ಯಾರಾ ಮೆಡಿಕಲ್, ಫಿಸಿಯೋಥೆರಪಿ, ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಯರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.


ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಂಗಳೂರಿನ ಕೆಎಂಸಿ, ಮಂಗಳಾ ಮತ್ತು ಸಿಟಿ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕಲುಷಿತ ನೀರಿನ ಸಮಸ್ಯೆಯಿಂದಾಗಿ ಫುಡ್ ಪಾಯ್ಸನ್ ಆಗಿರುವ ಶಂಕೆಯಿದೆ.


ವಿದ್ಯಾರ್ಥಿಗಳು ಹೇಳುವ ಪ್ರಕಾರ, ಕೆಲವು ದಿನಗಳಿಂದ ನೀರಿನ ಸಮಸ್ಯೆ ಆಗ್ತಿದೆ. ಹಲವು ಬಾರಿ ಒಂದಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಿದೆ. ನೀರಿನ ಸಮಸ್ಯೆ ಕಾರಣದಿಂದಲೇ ಘಟನೆ ಸಂಭವಿಸಿದೆ ಎಂದಿದ್ದಾರೆ. ಒಬ್ಬಳು ವಿದ್ಯಾರ್ಥಿನಿ, ನಾವು ನಿನ್ನೆ ಸಂಜೆ ಊಟ ಮಾಡಿದ್ದು. ಆನಂತರ ಹೊಟ್ಟೆ ಸಮಸ್ಯೆ ಉಂಟಾಗಿತ್ತು. ಇವತ್ತು ಮಧ್ಯಾಹ್ನ ಹಲವರಿಗೆ ಸಮಸ್ಯೆ ಎದುರಾಗಿತ್ತು ಎಂದಿದ್ದಾಳೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದು 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ. ಎಜೆ, ಯುನಿಟಿ, ಮಂಗಳಾ, ಕೆಎಂಸಿ, ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳು ಬೆಳಗ್ಗಿನಿಂದಲೇ ಹೊಟ್ಟೆ ನೋವು, ವಾಂತಿ, ಭೇದಿಗೆ ಒಳಗಾಗಿದ್ದರು. ಪೋಷಕರು, ವಿದ್ಯಾರ್ಥಿಗಳು ಹಾಸ್ಟೆಲ್ ಹೊರಗಡೆ ಪ್ರತಿಭಟನೆ ನಡೆಸಿದ್ದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕಲುಷಿತ ನೀರಿನ ಬಗ್ಗೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದಿದ್ದಾರೆ.
Mangalore Food poisoning, more than 100 plus Students of City Hospital nursing students admitted. The exact reason for this is yet to be known. Police commissioner Shashi Kumar rushed to the spot. After the students complained of food poisoning, stomach ache, loose motions and vomiting, they were shifted in the college buses and admitted to various hospitals in city.It is reported that the condition of some of the students is serious.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm