ಬ್ರೇಕಿಂಗ್ ನ್ಯೂಸ್
20-10-20 03:51 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 20: ಬೆಂಗಳೂರು ಮತ್ತು ಮಂಗಳೂರಿನಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಪೊಲೀಸರು ಬೇಟೆಗಿಳಿದಿರುವಾಗಲೇ ಮಂಗಳೂರಿನಲ್ಲಿ ಖಾಸಗಿ ಬಸ್ ಮಾಲಕರ ಸಂಘದವರು ಡ್ರಗ್ ವಿರುದ್ಧ ಜಾಗೃತಿ ಅಭಿಯಾನಕ್ಕೆ ಇಳಿದಿದ್ದಾರೆ.
ಮಂಗಳೂರು ನಗರದಲ್ಲಿ ಸಂಚರಿಸುವ ಮಂಗಳಾದೇವಿ- ಸ್ಟೇಟ್ ಬ್ಯಾಂಕ್ ನಡುವಿನ ಖಾಸಗಿ ಬಸ್ ಒಂದಕ್ಕೆ ಡ್ರಗ್ ವಿರುದ್ಧ ಜಾಗೃತಿ ಮೂಡಿಸುವ ರೀತಿ ಬಣ್ಣ ಬಳಿಯಲಾಗಿದೆ. ಅಲ್ಲದೆ, Say No to Drugs, Your life is in your Hands, Life does not Rewind, Drug will be your Doom ಹೀಗೆ ನಾನಾ ರೀತಿಯ ಜಾಗೃತಿ ಸ್ಲೋಗನ್ ಗಳನ್ನು ಬಸ್ಸಿನ ಹೊರಭಾಗದಲ್ಲಿ ಬರೆಯಲಾಗಿದೆ. ನಗರದಲ್ಲಿ ಅತಿ ಹೆಚ್ಚು ಬಾರಿ ಓಡಾಡುವ ಮತ್ತು ಅತಿ ಹೆಚ್ಚು ಜನ ನೋಡಬಹುದಾದ ಬಸ್ ಇದಾಗಿದ್ದು ಖಾಸಗಿ ಬಸ್ಸಿನ ಡ್ರಗ್ ವಿರೋಧಿ ಜಾಗೃತಿ ಅಭಿಯಾನ ಜನರ ಗಮನ ಸೆಳೆದಿದೆ. ಅಲ್ಲದೆ, ಡ್ರಗ್ ಅನ್ನು ಪಿಶಾಚಿಯಂತೆ ಚಿತ್ರಿಸಿ ಯುವಜನರನ್ನು ಆಕರ್ಷಿಸುವ ರೀತಿ ಸಿಂಬಲ್ ಬಳಸಲಾಗಿದೆ.





ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ತಮ್ಮ ವಿಭಿನ್ನ ಪ್ರಯತ್ನದ ಬಗ್ಗೆ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಪ್ರಜ್ಞಾವಂತರ ನಗರ ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಜಾಗೃತಿ ಅನಿವಾರ್ಯ ಎನಿಸಿದೆ.
ನಮ್ಮ ಸಿಟಿ ಬಸ್ ಜನರ ಪ್ರಯಾಣಕ್ಕೆ ಮಾತ್ರವಲ್ಲ, ಜನಜಾಗೃತಿ ಮೂಡಿಸುವ ಮಾಧ್ಯಮವೂ ಹೌದು. ಈ ನಿಟ್ಟಿನಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜನಜಾಗೃತಿ ಮೂಡಿಸುವ ಒಂದು ಪ್ರಯತ್ನ ಎಂದು ಬರೆದಿದ್ದಾರೆ. ಫೇಸ್ ಬುಕ್ ಬರಹಕ್ಕೆ ಭಾರೀ ಪ್ರತಿಕ್ರಿಯೆ ಬಂದಿದ್ದು, ಜನರು ಸಿಟಿ ಬಸ್ಸಿನವರ ಉತ್ತಮ ಪ್ರಯತ್ನ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Video:
Dilraj Alva, the owner of a private bus titled Sri Ganesh Prasad, plying on Route 27, has taken up a commendable initiative to spread awareness about drugs.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm