ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am