ಬ್ರೇಕಿಂಗ್ ನ್ಯೂಸ್
16-02-23 10:51 pm Mangalore Correspondent ಕರಾವಳಿ
ಮಂಗಳೂರು, ಫೆ.16: ಬಂಟ್ವಾಳದ ತುಂಬೆಯಿಂದ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ನಗರದ ಕಂಕನಾಡಿಯ ಗರೋಡಿಯಲ್ಲಿ ಒಡೆದು ಹೋಗಿದ್ದು ರಸ್ತೆಯಲ್ಲಿ ನೀರು ನದಿಯಂತೆ ಹರಿದಿದೆ.
ಬುಧವಾರ ರಾತ್ರಿಯಿಂದಲೇ ನೀರು ಒಸರುತ್ತಿದ್ದು ಗುರುವಾರ ಸಂಜೆಯ ವೇಳೆಗೆ ನದಿಯ ರೂಪದಲ್ಲಿ ನೀರು ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಖಾಸಗಿ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ತಾಗಿ ಪೈಪ್ ಒಡೆದಿದೆ ಎನ್ನಲಾಗಿದೆ. ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದುದರಿಂದ ವಾಹನ ಸವಾರರು ಪರದಾಟ ಅನುಭವಿಸಿದರು. ಗರೋಡಿ ರಸ್ತೆಯಿಂದ ಪಂಪ್ವೆಲ್ ಬರುವ ರಸ್ತೆಯ ಉದ್ದಕ್ಕೂ ನೀರು ತೋಡಿನಂತೆ ಹರಿದಿದ್ದು ಬಳಿಕ ತುಂಬೆಯಿಂದಲೇ ನೀರಿನ ಹರಿವನ್ನು ನಿಲ್ಲಿಸಲಾಗಿದೆ.


ಈ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ಸಂದೀಪ್ ಗರೋಡಿ ಅವರನ್ನು ಕೇಳಿದಾಗ, ಬಂಟ್ವಾಳದ ನೇತ್ರಾವತಿಯಿಂದ ಮಂಗಳೂರು ಸಂಪರ್ಕಿಸುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದಿದೆ. ಗುರುವಾರ ಸಂಜೆ ವೇಳೆಗೆ ಜೆಸಿಬಿ ತಾಗಿ ಒಡೆದು ಹೋಗಿದ್ದು ನೀರು ರಸ್ತೆಯಲ್ಲೇ ಹರಿದು ಹೋಯಿತು. ಬಳಿಕ ನೀರಿನ ಪೂರೈಕೆಯನ್ನು ಸ್ಥಗಿತ ಮಾಡಲಾಯ್ತು ಎಂದು ತಿಳಿಸಿದ್ದಾರೆ.


ರಸ್ತೆಯಲ್ಲಿ ಪೂರ್ತಿ ನೀರು ಹರಿಯುತ್ತಿದ್ದರೂ, ನಿಲ್ಲಿಸಲಾಗದ ಪಾಲಿಕೆಯ ಆಡಳಿತದ ಬಗ್ಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದರು. ಮಳೆಗಾಲ ಅಲ್ಲದಿದ್ದರೂ, ಜೆಸಿಬಿ ಚಾಲಕನ ಎಡವಟ್ಟಿನಿಂದ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆ ಪೂರ್ತಿ ಕೆಸರುಮಯ ಆಗುವ ಸ್ಥಿತಿ ಎದುರಾಗಿದೆ.
#Mangalore #Garodi water pipe breaks out, #water goes wasted on road for hours pic.twitter.com/CXDVtleyUw
— Headline Karnataka (@hknewsonline) February 16, 2023
Mangalore Garodi water pipe breaks out, water goes wasted on road for hours near Garodi temple.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm