ಬ್ರೇಕಿಂಗ್ ನ್ಯೂಸ್
19-02-23 04:43 pm Mangalore Correspondent ಕರಾವಳಿ
ಬಂಟ್ವಾಳ, ಫೆ.19 : ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಕರೆಸಿ ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಹಿಂದು ಮಕ್ಕಳನ್ನು ಹೊರಕ್ಕೆ ತೆರಳುವಂತೆ ಒತ್ತಾಯ ಪಡಿಸಿದ ಘಟನೆ ವಿಟ್ಲ ಬಳಿಯ ಅಡ್ಯನಡ್ಕ ಎಂಬಲ್ಲಿ ನಡೆದಿದೆ.
ನುಸ್ರತುಲ್ ಯಂಗ್ ಮೆನ್ಸ್ ಅಸೋಸಿಯೇಷನ್ ಸಂಸ್ಥೆ ವತಿಯಿಂದ ಕೇಪು ಗ್ರಾಮದ ಅಡ್ಯನಡ್ಕದ ರಾಜಕಮಲ್ ಎಂಬ ಖಾಸಗಿ ಸಭಾಂಗಣದಲ್ಲಿ ಶನಿವಾರ ಸಂಜೆ ಶೈಕ್ಷಣಿಕ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಸ್ಥಳೀಯ ಜನತಾ ವಿದ್ಯಾಸಂಸ್ಥೆಯ ಶಾಲಾ ವಿದ್ಯಾರ್ಥಿಗಳನ್ನು ಕರೆಸಿದ್ದು ಅಲ್ಲಿ ಪ್ರವಾದಿ, ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಕೋಮು ಪ್ರಚೋದನೆ ರೀತಿ ಮತ ಪ್ರಚಾರ ನಡೆಸುತ್ತಿದ್ದಾರೆಂದು ಹೇಳಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ನಿಲ್ಲಿಸಿದ್ದಾರೆ.


ಅಲ್ಲದೆ, ಶಿವರಾತ್ರಿಯ ದಿನ ಶಾಲೆಗೆ ರಜೆ ಇದ್ದರೂ ಸಂಜೆ ವೇಳೆಗೆ ಮುಸ್ಲಿಂ ಸಂಘಟನೆಯ ಕಾರ್ಯಾಗಾರಕ್ಕೆ ಕಳುಹಿಸಿದ್ದ ಶಿಕ್ಷಕರ ಬಗ್ಗೆ ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮಕ್ಕೆ ಬಂದು ಕುಳಿತಿದ್ದ ಹಿಂದು ವಿದ್ಯಾರ್ಥಿಗಳನ್ನು ಸ್ಥಳದಿಂದ ಎಬ್ಬಿಸಿ ಹೊರಕ್ಕೆ ಕಳಿಸಿದ್ದಾರೆ. ವಿಟ್ಲ ಪೊಲೀಸರನ್ನು ಸ್ಥಳಕ್ಕೆ ಕರೆಸಿ, ಈ ರೀತಿಯ ಕಾರ್ಯಕ್ರಮಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅನಂತರ, ಕಾರ್ಯಾಗಾರ ಅರ್ಧಕ್ಕೆ ರದ್ದಾಗಿದೆ.

ಈ ಬಗ್ಗೆ ವಿಟ್ಲ ಠಾಣೆಗೆ ಮಾಧವ ಮೂಲ್ಯ ಎಂಬವರು ದೂರು ನೀಡಿದ್ದು, ಶೈಕ್ಷಣಿಕ ಕಾರ್ಯಾಗಾರ ನೆಪದಲ್ಲಿ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಶಾಲಾ ಮುಖ್ಯೋಪಾಧ್ಯಾಯ ಟಿ.ಆರ್.ನಾಯಕ್, ರಫೀಕ್ ಮಾಸ್ಟರ್ ಆತೂರು ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ವಿರುದ್ಧ ದೂರು ದಾಖಲಿಸಿದ್ದಾರೆ.
Islam teaching in the name of Educational program at school in Vittal Dakshina Kannada, Hindu activists object and stop the program sending Hindu student's out of the school. A case has been registered at the Vittal police station.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am