ಬ್ರೇಕಿಂಗ್ ನ್ಯೂಸ್
19-02-23 04:43 pm Mangalore Correspondent ಕರಾವಳಿ
ಬಂಟ್ವಾಳ, ಫೆ.19 : ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಕರೆಸಿ ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಹಿಂದು ಮಕ್ಕಳನ್ನು ಹೊರಕ್ಕೆ ತೆರಳುವಂತೆ ಒತ್ತಾಯ ಪಡಿಸಿದ ಘಟನೆ ವಿಟ್ಲ ಬಳಿಯ ಅಡ್ಯನಡ್ಕ ಎಂಬಲ್ಲಿ ನಡೆದಿದೆ.
ನುಸ್ರತುಲ್ ಯಂಗ್ ಮೆನ್ಸ್ ಅಸೋಸಿಯೇಷನ್ ಸಂಸ್ಥೆ ವತಿಯಿಂದ ಕೇಪು ಗ್ರಾಮದ ಅಡ್ಯನಡ್ಕದ ರಾಜಕಮಲ್ ಎಂಬ ಖಾಸಗಿ ಸಭಾಂಗಣದಲ್ಲಿ ಶನಿವಾರ ಸಂಜೆ ಶೈಕ್ಷಣಿಕ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರಕ್ಕೆ ಸ್ಥಳೀಯ ಜನತಾ ವಿದ್ಯಾಸಂಸ್ಥೆಯ ಶಾಲಾ ವಿದ್ಯಾರ್ಥಿಗಳನ್ನು ಕರೆಸಿದ್ದು ಅಲ್ಲಿ ಪ್ರವಾದಿ, ಇಸ್ಲಾಂ ಬಗ್ಗೆ ಬೋಧನೆ ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಕೋಮು ಪ್ರಚೋದನೆ ರೀತಿ ಮತ ಪ್ರಚಾರ ನಡೆಸುತ್ತಿದ್ದಾರೆಂದು ಹೇಳಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ನಿಲ್ಲಿಸಿದ್ದಾರೆ.


ಅಲ್ಲದೆ, ಶಿವರಾತ್ರಿಯ ದಿನ ಶಾಲೆಗೆ ರಜೆ ಇದ್ದರೂ ಸಂಜೆ ವೇಳೆಗೆ ಮುಸ್ಲಿಂ ಸಂಘಟನೆಯ ಕಾರ್ಯಾಗಾರಕ್ಕೆ ಕಳುಹಿಸಿದ್ದ ಶಿಕ್ಷಕರ ಬಗ್ಗೆ ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮಕ್ಕೆ ಬಂದು ಕುಳಿತಿದ್ದ ಹಿಂದು ವಿದ್ಯಾರ್ಥಿಗಳನ್ನು ಸ್ಥಳದಿಂದ ಎಬ್ಬಿಸಿ ಹೊರಕ್ಕೆ ಕಳಿಸಿದ್ದಾರೆ. ವಿಟ್ಲ ಪೊಲೀಸರನ್ನು ಸ್ಥಳಕ್ಕೆ ಕರೆಸಿ, ಈ ರೀತಿಯ ಕಾರ್ಯಕ್ರಮಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅನಂತರ, ಕಾರ್ಯಾಗಾರ ಅರ್ಧಕ್ಕೆ ರದ್ದಾಗಿದೆ.

ಈ ಬಗ್ಗೆ ವಿಟ್ಲ ಠಾಣೆಗೆ ಮಾಧವ ಮೂಲ್ಯ ಎಂಬವರು ದೂರು ನೀಡಿದ್ದು, ಶೈಕ್ಷಣಿಕ ಕಾರ್ಯಾಗಾರ ನೆಪದಲ್ಲಿ ವಿದ್ಯಾರ್ಥಿಗಳನ್ನು ಕರೆಸಿಕೊಂಡು ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಶಾಲಾ ಮುಖ್ಯೋಪಾಧ್ಯಾಯ ಟಿ.ಆರ್.ನಾಯಕ್, ರಫೀಕ್ ಮಾಸ್ಟರ್ ಆತೂರು ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ವಿರುದ್ಧ ದೂರು ದಾಖಲಿಸಿದ್ದಾರೆ.
Islam teaching in the name of Educational program at school in Vittal Dakshina Kannada, Hindu activists object and stop the program sending Hindu student's out of the school. A case has been registered at the Vittal police station.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm