ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm