ಬ್ರೇಕಿಂಗ್ ನ್ಯೂಸ್
21-10-20 10:21 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಪಚ್ಚನಾಡಿ ದುರಂತದ ಬಗ್ಗೆ ಹೈಕೋರ್ಟ್ ಛಾಟಿಯಿಂದ ಎಚ್ಚೆತ್ತ ರಾಜ್ಯ ಸರಕಾರ ನಗರಾಭಿವೃದ್ಧಿ ಇಲಾಖೆ ಮೂಲಕ ಸಂತ್ರಸ್ತರಿಗೆ ಪರಿಹಾರ ನೀಡಲು 14 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಭಾರಿ ಮಳೆಯಿಂದಾಗಿ ಕಳೆದ ವರ್ಷ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದ ಮಂದಾರ ಪ್ರದೇಶದ 35 ಕುಟುಂಬಗಳ ಮನೆ, ಕೃಷಿ ಭೂಮಿ ನಾಶವಾಗಿ ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದರು. ಬೀದಿ ಪಾಲಾಗಿದ್ದ ಸಂತ್ರಸ್ತರಿಗೆ ಪರಿಹಾರ ನೀಡಲು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಆದರೆ, ಮಹಾನಗರ ಪಾಲಿಕೆಯಿಂದ ಪರಿಹಾರ ನೀಡುವ ವ್ಯವಸ್ಥೆ ಆಗಿರಲಿಲ್ಲ. ಸಂತ್ರಸ್ತರಿಗೆ ಕುಲಶೇಖರದಲ್ಲಿ ಉಳಕೊಳ್ಳಲು ವ್ಯವಸ್ಥೆ ಮಾಡಿದ್ದರೆ ವಿನಾ ಪರಿಹಾರದ ವ್ಯವಸ್ಥೆಗೆ ಮುಂದಾಗಿರಲಿಲ್ಲ. ಹೀಗಾಗಿ ಸಂತ್ರಸ್ತರ ಪರವಾಗಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಹೈಕೋರ್ಟ್ ಕಳೆದ ಅ.12ರಂದು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರಕಾರಕ್ಕೆ ಛಾಟಿ ಬೀಸಿದ್ದು ಪಾಲಿಕೆಯ ಆಸ್ತಿಯನ್ನು ಅಡವಿಟ್ಟಾದ್ರೂ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಈ ದುರಂತ ಸಂಭವಿಸಿದೆ. ರಾಜ್ಯ ಸರಕಾರವೂ ಇಲ್ಲಿ ಮೂಕ ಪ್ರೇಕ್ಷಕನಾಗುವಂತಿಲ್ಲ ಎಂದು ಸೂಚನೆ ನೀಡಿತ್ತು.
ಹೈಕೋರ್ಟ್ ನಲ್ಲಿ ಮುಖಭಂಗ ಅನುಭವಿಸಿದ್ದ ಮಹಾನಗರ ಪಾಲಿಕೆಯ ಆಡಳಿತ ಈಗ ಶಾಸಕರು ಮತ್ತು ಸಂಸದರ ಮೂಲಕ ಪ್ರಯತ್ನ ಮಾಡಿ, ತ್ವರಿತವಾಗಿ ಹಣ ಬಿಡುಗಡೆ ಮಾಡಲು ಯಶಸ್ವಿಯಾಗಿದೆ.
ಸಂತ್ರಸ್ತರಿಗೆ ಅಂದಾಜು 20 ಕೋಟಿ ಪರಿಹಾರ ಪಾವತಿಸುವಂತೆ ಕಳೆದ ಬಾರಿ ಸರಕಾರಕ್ಕೆ ಮನವಿಯನ್ನು ಮಾಡಲಾಗಿತ್ತು. ರಾಜ್ಯ ಸರಕಾರ ಈಗ ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಹಣ ಬಿಡುಗಡೆಗೊಳಿಸಿದೆ. ಈ ಹಿಂದೆಯೇ ರಾಜ್ಯ ಸರಕಾರದಿಂದ 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು. ಇದೀಗ ಒಟ್ಟು 22 ಕೋಟಿ ರೂಪಾಯಿ ಅನುದಾನ ಲಭಿಸಿದಂತಾಗಿದೆ. ಈ ಪೈಕಿ, ಸಂತ್ರಸ್ತರಿಗೆ ಎಷ್ಟು ಪಾಲು ಸಿಗುತ್ತದೋ ಕಾದು ನೋಡಬೇಕು.
14 Crores released as compensation for families affected by landslide in Pachanady, Mangalore. Recently The state HC had directed the state government to permit MCC to pledge its fixed assets and raise loan from the bank to pay compensation to families affected by the landslide at the Pachanady dumping yard last year.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm