ಬ್ರೇಕಿಂಗ್ ನ್ಯೂಸ್
21-10-20 10:21 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಪಚ್ಚನಾಡಿ ದುರಂತದ ಬಗ್ಗೆ ಹೈಕೋರ್ಟ್ ಛಾಟಿಯಿಂದ ಎಚ್ಚೆತ್ತ ರಾಜ್ಯ ಸರಕಾರ ನಗರಾಭಿವೃದ್ಧಿ ಇಲಾಖೆ ಮೂಲಕ ಸಂತ್ರಸ್ತರಿಗೆ ಪರಿಹಾರ ನೀಡಲು 14 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಭಾರಿ ಮಳೆಯಿಂದಾಗಿ ಕಳೆದ ವರ್ಷ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದ ಮಂದಾರ ಪ್ರದೇಶದ 35 ಕುಟುಂಬಗಳ ಮನೆ, ಕೃಷಿ ಭೂಮಿ ನಾಶವಾಗಿ ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದರು. ಬೀದಿ ಪಾಲಾಗಿದ್ದ ಸಂತ್ರಸ್ತರಿಗೆ ಪರಿಹಾರ ನೀಡಲು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಆದರೆ, ಮಹಾನಗರ ಪಾಲಿಕೆಯಿಂದ ಪರಿಹಾರ ನೀಡುವ ವ್ಯವಸ್ಥೆ ಆಗಿರಲಿಲ್ಲ. ಸಂತ್ರಸ್ತರಿಗೆ ಕುಲಶೇಖರದಲ್ಲಿ ಉಳಕೊಳ್ಳಲು ವ್ಯವಸ್ಥೆ ಮಾಡಿದ್ದರೆ ವಿನಾ ಪರಿಹಾರದ ವ್ಯವಸ್ಥೆಗೆ ಮುಂದಾಗಿರಲಿಲ್ಲ. ಹೀಗಾಗಿ ಸಂತ್ರಸ್ತರ ಪರವಾಗಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಹೈಕೋರ್ಟ್ ಕಳೆದ ಅ.12ರಂದು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರಕಾರಕ್ಕೆ ಛಾಟಿ ಬೀಸಿದ್ದು ಪಾಲಿಕೆಯ ಆಸ್ತಿಯನ್ನು ಅಡವಿಟ್ಟಾದ್ರೂ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಈ ದುರಂತ ಸಂಭವಿಸಿದೆ. ರಾಜ್ಯ ಸರಕಾರವೂ ಇಲ್ಲಿ ಮೂಕ ಪ್ರೇಕ್ಷಕನಾಗುವಂತಿಲ್ಲ ಎಂದು ಸೂಚನೆ ನೀಡಿತ್ತು.

ಹೈಕೋರ್ಟ್ ನಲ್ಲಿ ಮುಖಭಂಗ ಅನುಭವಿಸಿದ್ದ ಮಹಾನಗರ ಪಾಲಿಕೆಯ ಆಡಳಿತ ಈಗ ಶಾಸಕರು ಮತ್ತು ಸಂಸದರ ಮೂಲಕ ಪ್ರಯತ್ನ ಮಾಡಿ, ತ್ವರಿತವಾಗಿ ಹಣ ಬಿಡುಗಡೆ ಮಾಡಲು ಯಶಸ್ವಿಯಾಗಿದೆ.
ಸಂತ್ರಸ್ತರಿಗೆ ಅಂದಾಜು 20 ಕೋಟಿ ಪರಿಹಾರ ಪಾವತಿಸುವಂತೆ ಕಳೆದ ಬಾರಿ ಸರಕಾರಕ್ಕೆ ಮನವಿಯನ್ನು ಮಾಡಲಾಗಿತ್ತು. ರಾಜ್ಯ ಸರಕಾರ ಈಗ ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಹಣ ಬಿಡುಗಡೆಗೊಳಿಸಿದೆ. ಈ ಹಿಂದೆಯೇ ರಾಜ್ಯ ಸರಕಾರದಿಂದ 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು. ಇದೀಗ ಒಟ್ಟು 22 ಕೋಟಿ ರೂಪಾಯಿ ಅನುದಾನ ಲಭಿಸಿದಂತಾಗಿದೆ. ಈ ಪೈಕಿ, ಸಂತ್ರಸ್ತರಿಗೆ ಎಷ್ಟು ಪಾಲು ಸಿಗುತ್ತದೋ ಕಾದು ನೋಡಬೇಕು.
14 Crores released as compensation for families affected by landslide in Pachanady, Mangalore. Recently The state HC had directed the state government to permit MCC to pledge its fixed assets and raise loan from the bank to pay compensation to families affected by the landslide at the Pachanady dumping yard last year.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am