ಬ್ರೇಕಿಂಗ್ ನ್ಯೂಸ್
22-10-20 10:41 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 22: ನವರಾತ್ರಿ ವೇಳೆ ಉಪವಾಸ ವ್ರತ ಮಾಡೋದು, ದೇವಸ್ಥಾನಕ್ಕೆ ತೆರಳಿ ಹೋಮ ಹವನಗಳನ್ನು ಸಲ್ಲಿಸೋದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬರು ತಮಿಳುನಾಡು ಮೂಲದ ಭಕ್ತ ವಿಶಿಷ್ಟ ರೀತಿಯಲ್ಲಿ ನವರಾತ್ರಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಮಿಳುನಾಡು ಮೂಲದ ರಾಜಶೇಖರ ಎಂಬವರು ದೇವಸ್ಥಾನದಲ್ಲಿ ಭಕ್ತರು ಊಟ ಮಾಡಿದ ಎಲೆಯನ್ನು ಎತ್ತುವುದು ಹಾಗೂ ಭಕ್ತರಿಗೆ ನೀರು, ದೇಗುಲದಲ್ಲಿ ಚಾಕರಿ ಮಾಡುವ ಕೆಲಸದಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹೀಗೂ ಒಂದು ರೀತಿಯ ಅರ್ಪಣಾ ಭಾವದ ಸೇವೆಯನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.

ರಾಜಶೇಖರ್ ತಮಿಳುನಾಡಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಪ್ರತಿವರ್ಷ ನವರಾತ್ರಿಗೆ ತಾಯಿ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇಗುಲಕ್ಕೆ ಆಗಮಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ಚಾಕರಿ ಕೆಲಸ ಮಾಡುವ ಮೂಲಕ ದೇವಿಯ ಸೇವೆ ನೆರವೇರಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ಸಚ್ಚಿದಾನಂದ ಚಾತ್ರಾ ಹೇಳುವ ಪ್ರಕಾರ, ದೇವಿಗೆ ಭಕ್ತರು ಬಂದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಥರಾವರಿ ಸೇವೆಗಳನ್ನು ಸಲ್ಲಿಸುತ್ತಾರೆ. ತಮಿಳುನಾಡು ಮೂಲದ ವ್ಯಕ್ತಿಯ ಸೇವೆ ಬಹಳ ವಿಶಿಷ್ಟವಾಗಿ ಕಾಣುತ್ತಿದೆ. ದೇವರ ಮುಂದೆ ಭಕ್ತರೆಲ್ಲ ಸಮಾನರು ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.
ಹಿಂದೆ ಕೊಲ್ಲೂರಿಗೆ ಬಂದಿದ್ದಾಗ, ಕಮಲಶಿಲೆ ದೇವಸ್ಥಾನದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ನಂತರ ಮನಸ್ಸಿಗೆ ಬಹಳ ಸಂತೋಷವಾಗಿದೆ. ನವರಾತ್ರಿ ಸಂದರ್ಭದಲ್ಲಿ ಮೂರು ವರ್ಷಗಳಿಂದ ದೇವಸ್ಥಾನಕ್ಕೆ ಬರುತ್ತಿದ್ದು ಹತ್ತು ದಿನ ಇಲ್ಲೇ ಇದ್ದು ಚಾಕರಿ ಕೆಲಸಗಳನ್ನು ಮಾಡುತ್ತಿದ್ದೇನೆ. ಯಾವುದೇ ಹರಕೆ ಹೊತ್ತು ಈ ಕೆಲಸ ಮಾಡುತ್ತಿಲ್ಲ. ನನ್ನ ಮನ ಸಂತೋಷಕ್ಕಾಗಿ ದೇವರ ಸೇವೆ ನಡೆಸುತ್ತಿದ್ದೇನೆ ಎಂದು ರಾಜಶೇಖರ್ ಹೇಳುತ್ತಾರೆ.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 03:12 pm
HK News Staffer
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm