ಬ್ರೇಕಿಂಗ್ ನ್ಯೂಸ್
22-10-20 10:41 am Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 22: ನವರಾತ್ರಿ ವೇಳೆ ಉಪವಾಸ ವ್ರತ ಮಾಡೋದು, ದೇವಸ್ಥಾನಕ್ಕೆ ತೆರಳಿ ಹೋಮ ಹವನಗಳನ್ನು ಸಲ್ಲಿಸೋದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬರು ತಮಿಳುನಾಡು ಮೂಲದ ಭಕ್ತ ವಿಶಿಷ್ಟ ರೀತಿಯಲ್ಲಿ ನವರಾತ್ರಿ ಸೇವೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಸಿದ್ಧ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಮಿಳುನಾಡು ಮೂಲದ ರಾಜಶೇಖರ ಎಂಬವರು ದೇವಸ್ಥಾನದಲ್ಲಿ ಭಕ್ತರು ಊಟ ಮಾಡಿದ ಎಲೆಯನ್ನು ಎತ್ತುವುದು ಹಾಗೂ ಭಕ್ತರಿಗೆ ನೀರು, ದೇಗುಲದಲ್ಲಿ ಚಾಕರಿ ಮಾಡುವ ಕೆಲಸದಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹೀಗೂ ಒಂದು ರೀತಿಯ ಅರ್ಪಣಾ ಭಾವದ ಸೇವೆಯನ್ನು ನಡೆಸುತ್ತಿರುವುದು ಗಮನ ಸೆಳೆದಿದೆ.

ರಾಜಶೇಖರ್ ತಮಿಳುನಾಡಿನಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಪ್ರತಿವರ್ಷ ನವರಾತ್ರಿಗೆ ತಾಯಿ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇಗುಲಕ್ಕೆ ಆಗಮಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ಚಾಕರಿ ಕೆಲಸ ಮಾಡುವ ಮೂಲಕ ದೇವಿಯ ಸೇವೆ ನೆರವೇರಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ಸಚ್ಚಿದಾನಂದ ಚಾತ್ರಾ ಹೇಳುವ ಪ್ರಕಾರ, ದೇವಿಗೆ ಭಕ್ತರು ಬಂದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಥರಾವರಿ ಸೇವೆಗಳನ್ನು ಸಲ್ಲಿಸುತ್ತಾರೆ. ತಮಿಳುನಾಡು ಮೂಲದ ವ್ಯಕ್ತಿಯ ಸೇವೆ ಬಹಳ ವಿಶಿಷ್ಟವಾಗಿ ಕಾಣುತ್ತಿದೆ. ದೇವರ ಮುಂದೆ ಭಕ್ತರೆಲ್ಲ ಸಮಾನರು ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.
ಹಿಂದೆ ಕೊಲ್ಲೂರಿಗೆ ಬಂದಿದ್ದಾಗ, ಕಮಲಶಿಲೆ ದೇವಸ್ಥಾನದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದೇವಸ್ಥಾನಕ್ಕೆ ಭೇಟಿ ಕೊಟ್ಟ ನಂತರ ಮನಸ್ಸಿಗೆ ಬಹಳ ಸಂತೋಷವಾಗಿದೆ. ನವರಾತ್ರಿ ಸಂದರ್ಭದಲ್ಲಿ ಮೂರು ವರ್ಷಗಳಿಂದ ದೇವಸ್ಥಾನಕ್ಕೆ ಬರುತ್ತಿದ್ದು ಹತ್ತು ದಿನ ಇಲ್ಲೇ ಇದ್ದು ಚಾಕರಿ ಕೆಲಸಗಳನ್ನು ಮಾಡುತ್ತಿದ್ದೇನೆ. ಯಾವುದೇ ಹರಕೆ ಹೊತ್ತು ಈ ಕೆಲಸ ಮಾಡುತ್ತಿಲ್ಲ. ನನ್ನ ಮನ ಸಂತೋಷಕ್ಕಾಗಿ ದೇವರ ಸೇವೆ ನಡೆಸುತ್ತಿದ್ದೇನೆ ಎಂದು ರಾಜಶೇಖರ್ ಹೇಳುತ್ತಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm