ಬ್ರೇಕಿಂಗ್ ನ್ಯೂಸ್
23-02-23 07:37 pm Mangalore Correspondent ಕರಾವಳಿ
ಪುತ್ತೂರು, ಫೆ.23 : ಅರಣ್ಯ ಇಲಾಖೆಯ ಅಧಿಕಾರಿಗಳು ಆರಂಭಿಸಿದ್ದ ಆಪರೇಷನ್ ಎಲಿಫೆಂಟ್ ಯಶಸ್ವಿಯಾಗಿದೆ. ಇಬ್ಬರನ್ನು ಬಲಿ ತೆಗೆದುಕೊಂಡಿದೆ ಎನ್ನಲಾದ ಆನೆಯನ್ನು ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಸಮೀಪದ ಮಂಡೆಕರ ಕಾಡಿನಲ್ಲಿ ಸೆರೆಹಿಡಿಯಲಾಗಿದೆ.
ಗುರುವಾರ ಸಂಜೆ ಆನೆ ಪತ್ತೆಯಾಗುತ್ತಲೇ ತಜ್ಞ ವೈದ್ಯರು ಅರಿವಳಿಕೆ ಚುಚ್ಚುಮದ್ದು ಬಿಟ್ಟು ಆನೆಯನ್ನು ಸೆರೆಹಿಡಿಯುವ ಕೆಲಸ ಮಾಡಿದ್ದಾರೆ. ಸೋಮವಾರ ಬೆಳಗ್ಗೆ ಇಬ್ಬರನ್ನು ಬಲಿ ತೆಗೆದುಕೊಂಡ ಘಟನೆ ಬಳಿಕ ಅರಣ್ಯ ಸಿಬಂದಿ ಎಲಿಫೆಂಟ್ ಆಪರೇಷನ್ ಕಾರ್ಯಾಚರಣೆ ಆರಂಭಿಸಿದ್ದರು.
ಸುಬ್ರಹ್ಮಣ್ಯ, ಪುತ್ತೂರು, ಪಂಜ ವಿಭಾಗದ 100ಕ್ಕೂ ಮಿಕ್ಕಿದ ಅರಣ್ಯ ಇಲಾಖೆಯ ಸಿಬಂದಿ ಮತ್ತು ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದರು. ಡ್ರೋಣ್ ಬಳಸಿ ಆನೆಯ ಚಲನವಲನ ಪತ್ತೆ ಮಾಡುವ ಕಾರ್ಯ ನಡೆದಿತ್ತು. ಇದೀಗ ಆನೆ ಸೆರೆಸಿಕ್ಕಿರುವ ಕೊಂಬಾರು ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. ಆನೆ ಗುಂಪಾಗಿದ್ದರೆ, ತಿರುಗಿ ಬೀಳಬಹುದೆಂಬ ಮುನ್ನೆಚ್ಚರಿಕೆಯಿಂದ ಜನರು ಸಂಚಾರ ನಡೆಸದಂತೆ ಸೂಚಿಸಲಾಗಿದೆ. 5 ಸಾಕಾನೆಗಳು, ತಜ್ಞ ವೈದ್ಯರು, ಅರಣ್ಯ ಅಧಿಕಾರಿಗಳು ಸೇರಿ ಕಾರ್ಯಾಚರಣೆ ಆರಂಭಿಸಿದ್ದರು.
ಫೆ.20ರ ಸೋಮವಾರ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಹಾಲು ಸೊಸೈಟಿಗೆ ತೆರಳುತ್ತಿದ್ದ ರಂಜಿತಾ ರೈ (24) ಮೇಲೆ ದಾರಿಯಲ್ಲಿ ಆನೆ ದಾಳಿ ನಡೆಸಿತ್ತು. ಆಕೆಯ ಚೀರಾಟ ಕೇಳಿ ಪರಿಸರದ ನಿವಾಸಿ ರಮೇಶ್ ರೈ (52) ಸಹಾಯಕ್ಕೆ ಧಾವಿಸಿದ್ದರು. ಆದರೆ ಕಾಡಾನೆಯ ತಿವಿತಕ್ಕೆ ಸಿಲುಕಿ ಇಬ್ಬರೂ ಬಲಿಯಾಗಿದ್ದರು. ಈಗ ಸೆರೆ ಸಿಕ್ಕಿರುವ ಆನೆಯೇ ಅಂದು ದಾಳಿ ನಡೆಸಿತ್ತು ಎನ್ನುವ ಬಗ್ಗೆ ಖಾತರಿಯಿಲ್ಲ. ಈ ಭಾಗದ ಅರಣ್ಯ ಪ್ರದೇಶದಲ್ಲಿ ಇನ್ನಷ್ಟು ಕಾಡಾನೆಗಳು ಅರಿತುಕೊಂಡಿರುವ ಮಾಹಿತಿಗಳಿವೆ. ಹೀಗಾಗಿ ಯಾವ ಆನೆ ಅಂದು ದಾಳಿ ನಡೆಸಿತ್ತು ಎನ್ನುವುದನ್ನು ನೋಡಿದವರಿಲ್ಲ. ಬಂಧನ ಆಗಿರುವ ಆನೆಯನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ.
Elephant attack two killed in Kadaba, one wild tusker captured by Forest officials. The operation to capture the rogue elephant that claimed the lives of two people in Renjilady-Naila of Kadaba taluk, Dakshina Kannada district, on February 20, Monday morning, has been underway. Meanwhile, it has been reported that the forest department officials have successfully captured the rogue elephant. However, it needs to be ascertained whether it is the same elephant that killed two persons.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm