ಬ್ರೇಕಿಂಗ್ ನ್ಯೂಸ್
25-02-23 10:39 pm Udupi Correspondent ಕರಾವಳಿ
ಉಡುಪಿ, ಫೆ.25 : ಒಂದು ಕಾಲದ ಜನತಾ ಪರಿವಾರದ ಪ್ರಭಾವಿ ಮುಖಂಡ, ಆನಂತರದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರಿದ್ದ ಮಾಜಿ ಸಚಿವ, ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ಸದ್ದಿಲ್ಲದೆ ಕಾಂಗ್ರೆಸ್ ನತ್ತ ಸೆಳೆಯಲು ಕಸರತ್ತು ನಡೆದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವತಃ ಜಯಪ್ರಕಾಶ್ ಹೆಗ್ಡೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸು ಗುಸು ಹರಡಿದೆ.
1990- 2000 ದಶಕದಲ್ಲಿ ಪ್ರಭಾವಿ ನಾಯಕರಾಗಿದ್ದ ಹೆಗ್ಡೆಯವರು ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು ಶಾಸಕರಾಗಿ, ಸಚಿವರೂ ಆಗಿದ್ದವರು. ಕ್ಷೇತ್ರ ವಿಂಗಡಣೆಯಲ್ಲಿ ಬ್ರಹ್ಮಾವರ ಕ್ಷೇತ್ರ ರದ್ದುಗೊಂಡ ನಂತರ ಹೆಗ್ಡೆಯವರ ಸ್ಥಿತಿಯೂ ಅತಂತ್ರ ಆಗಿತ್ತು. ಬಳಿಕ ಕಾಂಗ್ರೆಸ್ ಸೇರಿದ್ದ ಜಯಪ್ರಕಾಶ್ ಹೆಗ್ಡೆ 2009ರಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಬಿಜೆಪಿಯ ಡಿ.ವಿ. ಸದಾನಂದ ಗೌಡ ವಿರುದ್ಧ ಸೋಲು ಅನುಭವಿಸಿದರು. 2011ರಲ್ಲಿ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಹೆಗ್ಡೆಯವರಿಗೆ ಗೆಲುವು ಸಿಕ್ಕಿತ್ತು. ಆದರೆ, 2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಎದುರು ಸೋಲು ಕಂಡಿದ್ದರಿಂದ ಕಾಂಗ್ರೆಸ್ ನಲ್ಲಿ ಹಿನ್ನಡೆ ಅನುಭವಿಸಿದ್ದರು.
ಈ ನಡುವೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ವಿರುದ್ಧ ಜಯಪ್ರಕಾಶ್ ಹೆಗ್ಡೆ ಬಂಡಾಯ ಕಣಕ್ಕಿಳಿದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ್ದಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಗಿಂತ ಜಯಪ್ರಕಾಶ್ ಹೆಗ್ಡೆ ಅವರಿಗೇ ಹೆಚ್ಚು ಮತ ಸಿಕ್ಕಿದ್ದು ಅವರ ಪ್ರಭಾವಕ್ಕೆ ಸಾಕ್ಷಿಯಾಗಿತ್ತು. ಇದರ ಬಳಿಕ ರಾಜಕೀಯದಿಂದಲೇ ದೂರವಿದ್ದ ಅವರನ್ನು ಕಳೆದ ಚುನಾವಣೆ ವೇಳೆಗೆ ಬಿಜೆಪಿ ಸೆಳೆದುಕೊಂಡಿತ್ತು. ಶಾಸಕ, ಸಂಸದ ಸ್ಥಾನದ ಮೇಲೆ ದೃಷ್ಟಿಯಿಟ್ಟು ಬಂದಿದ್ದ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಸಕ್ರಿಯ ರಾಜಕಾರಣದಿಂದ ದೂರವಿದ್ದು ಆಯೋಗಕ್ಕೆ ಅಧ್ಯಕ್ಷರಾಗಿ ಉಳಿದುಬಿಡುವುದು ಜಯಪ್ರಕಾಶ್ ಹೆಗ್ಡೆ ಜಾಯಮಾನ ಅಲ್ಲ. ಸಿದ್ದರಾಮಯ್ಯ ಸಮಕಾಲೀನರಾಗಿರುವ ಮತ್ತು ಜೊತೆ ಜೊತೆಗೇ ಜನತಾ ಪರಿವಾರದಲ್ಲಿ ರಾಮಕೃಷ್ಣ ಹೆಗ್ಡೆ ಕಾಲದಲ್ಲಿ ಮುಂಚೂಣಿಯಲ್ಲಿದ್ದ ಹೆಗ್ಡೆಯವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ತರಬೇಕು ಎನ್ನುವುದು ಕಾಂಗ್ರೆಸ್ ಒಳಗಿನ ಮಾತು. ಅಲ್ಲದೆ, ಕಾರ್ಕಳದಲ್ಲಿ ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಆ ಜಾಗವನ್ನು ಹೆಗ್ಡೆ ಮೂಲಕ ತುಂಬಿಸಬೇಕು ಎನ್ನುವುದು ಕಾರ್ಯಕರ್ತರ ಇರಾದೆ.
ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿದಿರುವುದರಿಂದ ಪ್ರಭಾವಿ ಅಭ್ಯರ್ಥಿ ಸ್ಪರ್ಧಿಸಿದಲ್ಲಿ ಸುನಿಲ್ ಕುಮಾರ್ ಮಣಿಸಬಹುದೆಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜಯಪ್ರಕಾಶ್ ಹೆಗ್ಡೆಯವರಿಗೆ ಕರೆ ಮಾಡಿದ್ದು, ಕಾರ್ಕಳ ಕ್ಷೇತ್ರದಿಂದ ಟಿಕೆಟ್ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಬೈಂದೂರು ಅಥವಾ ಕುಂದಾಪುರದಲ್ಲಿ ಕಣಕ್ಕಿಳಿಸಬೇಕು ಎನ್ನುವ ಆಗ್ರಹವೂ ಬಿಜೆಪಿ ಕಾರ್ಯಕರ್ತರಲ್ಲಿದೆ. ಹೀಗಾಗಿ ಜಯಪ್ರಕಾಶ್ ಹೆಗ್ಡೆ ಈ ಹಂತದಲ್ಲಿ ಕಾಂಗ್ರೆಸ್ ನತ್ತ ಹೋಗುವುದು, ಅಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸುವುದು ದೂರದ ಮಾತು ಎನ್ನುವ ಮಾತೂ ಕೇಳಿಬರುತ್ತಿದೆ.
Plans to bring Jayaprakash Hegde to Congress, Siddu and Dk in action to bring Jayaprakash somehow to the congress Party.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm